ಪ್ಲವನಾಮ ಸಂವತ್ಸರವು ಕೊನೆಯಾಗುತ್ತಿರುವ ಸಂದರ್ಭದಲ್ಲಿ, ಶುಭಕೃತ್ ಸಂವತ್ಸರ ಹೊಸ್ತಿಲ್ಲಲ್ಲಿ ಇದ್ದೇವೆ. ಎರಡು ವರ್ಷಗಳಿಂದ ಯುಗಾದಿಯ ಸಂಭ್ರಮಕ್ಕೆ ಕಡಿವಾಣ ಹಾಕಿ ಕೊಂಡು ಕಳೆದಿದ್ದೇವೆ. ಕೊರೋನಾ ಸಮಯದಲ್ಲಿ ಯಾವ ಸಂಭ್ರಮಕ್ಕೂ ಅವಕಾಶವಿರಲಿಲ್ಲ. ಆದರೆ ಈ ಬಾರಿ ಎಲ್ಲವೂ ಮುಕ್ತ ಮುಕ್ತ. ಕೊರೊನಾ ತೀವ್ರತೆ ಕಮ್ಮಿಯಾಗಿದೆ. ಹೊಸ ವರ್ಷದ ಸಂತಸಕ್ಕೆ ಬ್ರೇಕ್ ಇಲ್ಲವೇ ಇಲ್ಲ. ಎಲ್ಲರಿಗೂ ಯುಗಾದಿಯ ಶುಭಾಶಯಗಳು.
ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಈ ಹಬ್ಬವು ಹಿಂದುಗಳ ವರ್ಷಾರಂಭದ ಪವಿತ್ರ ದಿನ. ಯುಗಾದಿ ಎಂದರೆ ನಮಗೆ ಹೊಸವರ್ಷ. ಹೊಸತನಕ್ಕೆ ನಾಂದಿ. ಯುಗಾದಿ ಸಂಸ್ಕೃತ ಶಬ್ದವಾಗಿದೆ. ಯುಗ+ ಆದಿ= ಯುಗಾದಿ . ಯುಗವೆಂದರೆ ಅವಧಿ, ಆದಿ ಎಂದರೆ ಪ್ರಾರಂಭ. ಹೊಸ ಸಂವತ್ಸರದ ಆರಂಭ.
ಪ್ರಕೃತಿಯಲ್ಲಿ ಈ ಪರ್ವ ಕಾಲದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗಿಡಮರಗಳ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿ ಹಲವು ರೀತಿಯ ವ್ಯತ್ಯಾಸ ಗೋಚರವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಶಾಖ ಹೆಚ್ಚಾಗಿ ಇರುವುದರಿಂದ ಅಸಾಧ್ಯವಾದ ಸೆಖೆಯ ಅನುಭವ .
ಯುಗಾದಿಯ ಸುರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆಯು ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.ಹೊಸ ಕನಸುಗಳು , ನಿರೀಕ್ಷೆಗಳು , ಎಲ್ಲವೂ ಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ.
ಈ ಹಬ್ಬ ನಮ್ಮ ನಿತ್ಯ ಜೀವನಕ್ಕೆ ಅಗತ್ಯವಾದ ಚೈತನ್ಯ ವನ್ನು ತುಂಬುತ್ತದೆ. ಈ ಸಂದರ್ಭದಲ್ಲಿನ ಎಲ್ಲಾ ಆಚರಣೆಗಳೂ ಮಹತ್ವದ್ದೇ ಆಗಿದೆ. ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಮಹತ್ವವಿದೆ. ಆದಿನ ನಾವು ಪ್ರಾತಃಕಾಲದಲ್ಲಿ ಮಾಡುವ ಎಣ್ಣೆ ಮೈಗೆ ಹಚ್ಚಿ ಮಾಡುವ ಅಭ್ಯಂಗವಿರಲಿ, ಆದಿನ ವಿಶೇಷವಾದ ಬೇವು ಬೆಲ್ಲದ ಸೇವನೆಯಾಗಿರಲಿ, ಪಂಚಾಂಗ ಶ್ರವಣವಿರಲಿ ಎಲ್ಲವಕ್ಕೂ ಅದರದ್ದೇ ಆದ ಮಹತ್ವವಿದೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…