MIRROR FOCUS

#ಯುಗಾದಿ ಹಬ್ಬದ ಶುಭಾಶಯ | ಬದುಕಿನಲ್ಲಿ ಬೇವು ಬೆಲ್ಲ ತಿನ್ನುತ್ತಾ ಒಳ್ಳೆಯವರಾಗೋಣ, ಒಳ್ಳೆಯದು ಮಾಡೋಣ… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ಲವನಾಮ ಸಂವತ್ಸರವು ಕೊನೆಯಾಗುತ್ತಿರುವ ಸಂದರ್ಭದಲ್ಲಿ, ಶುಭಕೃತ್ ಸಂವತ್ಸರ ಹೊಸ್ತಿಲ್ಲಲ್ಲಿ ಇದ್ದೇವೆ. ಎರಡು ವರ್ಷಗಳಿಂದ ಯುಗಾದಿಯ ಸಂಭ್ರಮಕ್ಕೆ ಕಡಿವಾಣ ಹಾಕಿ ಕೊಂಡು ಕಳೆದಿದ್ದೇವೆ. ಕೊರೋನಾ ಸಮಯದಲ್ಲಿ ಯಾವ ಸಂಭ್ರಮಕ್ಕೂ ಅವಕಾಶವಿರಲಿಲ್ಲ. ಆದರೆ ಈ ಬಾರಿ ಎಲ್ಲವೂ ಮುಕ್ತ ಮುಕ್ತ. ಕೊರೊನಾ ತೀವ್ರತೆ ಕಮ್ಮಿಯಾಗಿದೆ. ಹೊಸ ವರ್ಷದ ಸಂತಸಕ್ಕೆ ಬ್ರೇಕ್ ಇಲ್ಲವೇ ಇಲ್ಲ. ಎಲ್ಲರಿಗೂ ಯುಗಾದಿಯ ಶುಭಾಶಯಗಳು.

Advertisement

ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಈ ಹಬ್ಬವು ಹಿಂದುಗಳ ವರ್ಷಾರಂಭದ ಪವಿತ್ರ ದಿನ. ಯುಗಾದಿ ಎಂದರೆ ನಮಗೆ ಹೊಸವರ್ಷ. ಹೊಸತನಕ್ಕೆ ನಾಂದಿ. ಯುಗಾದಿ ಸಂಸ್ಕೃತ ಶಬ್ದವಾಗಿದೆ. ಯುಗ+ ಆದಿ= ಯುಗಾದಿ . ಯುಗವೆಂದರೆ ಅವಧಿ, ಆದಿ ಎಂದರೆ ಪ್ರಾರಂಭ. ಹೊಸ ಸಂವತ್ಸರದ ಆರಂಭ.

ಪ್ರಕೃತಿಯಲ್ಲಿ ಈ ಪರ್ವ ಕಾಲದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗಿಡಮರಗಳ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿ ಹಲವು ರೀತಿಯ ವ್ಯತ್ಯಾಸ ಗೋಚರವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಶಾಖ ಹೆಚ್ಚಾಗಿ ಇರುವುದರಿಂದ ಅಸಾಧ್ಯವಾದ ಸೆಖೆಯ ಅನುಭವ .
ಯುಗಾದಿಯ ಸುರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆಯು ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.ಹೊಸ ಕನಸುಗಳು , ನಿರೀಕ್ಷೆಗಳು , ಎಲ್ಲವೂ ಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ.

ಈ ಹಬ್ಬ ನಮ್ಮ ನಿತ್ಯ ಜೀವನಕ್ಕೆ ಅಗತ್ಯವಾದ ಚೈತನ್ಯ ವನ್ನು ತುಂಬುತ್ತದೆ. ಈ ಸಂದರ್ಭದಲ್ಲಿನ ಎಲ್ಲಾ ಆಚರಣೆಗಳೂ ಮಹತ್ವದ್ದೇ ಆಗಿದೆ. ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಮಹತ್ವವಿದೆ. ಆದಿನ ನಾವು ಪ್ರಾತಃಕಾಲದಲ್ಲಿ ಮಾಡುವ ಎಣ್ಣೆ ಮೈಗೆ ಹಚ್ಚಿ ಮಾಡುವ ಅಭ್ಯಂಗವಿರಲಿ, ಆದಿನ ವಿಶೇಷವಾದ ಬೇವು ಬೆಲ್ಲದ ಸೇವನೆಯಾಗಿರಲಿ, ಪಂಚಾಂಗ ಶ್ರವಣವಿರಲಿ ಎಲ್ಲವಕ್ಕೂ ಅದರದ್ದೇ ಆದ ಮಹತ್ವವಿದೆ.

ನಮ್ಮ ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ವಿಶೇಷತೆ ಇದೆ. ದೀಪಾವಳಿಯಲ್ಲಿ ಅಭ್ಯಂಗ ವಿಶೇಷವಾದರೆ , ಯುಗಾದಿಯಲ್ಲಿ ಉಣ್ಣುವುದೇ ಹಬ್ಬ. ಹತ್ತು ಹಲವು ತಿನಿಸುಗಳನ್ನು ಮಾಡಿ , ನೆಂಟರಿಷ್ಟರೊಂದಿಗೆ ಹಂಚಿ ತಿನ್ನುವುದು ಯುಗಾದಿಯ ವಿಶೇಷಗಳಲ್ಲಿ ಒಂದು.ಈ ಬಾರಿಯ ಯುಗಾದಿ ನಮ್ಮೆಲ್ಲರಿಗೂ ಹೊಸ ಉಲ್ಲಾಸವನ್ನು ತುಂಬಲಿ, ಬದುಕಿನಲಿ ಕೃತಕತೆ ದೂರವಾಗಿ ಸಹಜತೆಗೆ ಮರಳುವಂತಾಗಲಿ.
Advertisement
# ಶ್ವಿನಿಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

3 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

8 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

17 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

17 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

17 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

17 hours ago