Advertisement
MIRROR FOCUS

#ಯುಗಾದಿ ಹಬ್ಬದ ಶುಭಾಶಯ | ಬದುಕಿನಲ್ಲಿ ಬೇವು ಬೆಲ್ಲ ತಿನ್ನುತ್ತಾ ಒಳ್ಳೆಯವರಾಗೋಣ, ಒಳ್ಳೆಯದು ಮಾಡೋಣ… |

Share

ಪ್ಲವನಾಮ ಸಂವತ್ಸರವು ಕೊನೆಯಾಗುತ್ತಿರುವ ಸಂದರ್ಭದಲ್ಲಿ, ಶುಭಕೃತ್ ಸಂವತ್ಸರ ಹೊಸ್ತಿಲ್ಲಲ್ಲಿ ಇದ್ದೇವೆ. ಎರಡು ವರ್ಷಗಳಿಂದ ಯುಗಾದಿಯ ಸಂಭ್ರಮಕ್ಕೆ ಕಡಿವಾಣ ಹಾಕಿ ಕೊಂಡು ಕಳೆದಿದ್ದೇವೆ. ಕೊರೋನಾ ಸಮಯದಲ್ಲಿ ಯಾವ ಸಂಭ್ರಮಕ್ಕೂ ಅವಕಾಶವಿರಲಿಲ್ಲ. ಆದರೆ ಈ ಬಾರಿ ಎಲ್ಲವೂ ಮುಕ್ತ ಮುಕ್ತ. ಕೊರೊನಾ ತೀವ್ರತೆ ಕಮ್ಮಿಯಾಗಿದೆ. ಹೊಸ ವರ್ಷದ ಸಂತಸಕ್ಕೆ ಬ್ರೇಕ್ ಇಲ್ಲವೇ ಇಲ್ಲ. ಎಲ್ಲರಿಗೂ ಯುಗಾದಿಯ ಶುಭಾಶಯಗಳು.

ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಈ ಹಬ್ಬವು ಹಿಂದುಗಳ ವರ್ಷಾರಂಭದ ಪವಿತ್ರ ದಿನ. ಯುಗಾದಿ ಎಂದರೆ ನಮಗೆ ಹೊಸವರ್ಷ. ಹೊಸತನಕ್ಕೆ ನಾಂದಿ. ಯುಗಾದಿ ಸಂಸ್ಕೃತ ಶಬ್ದವಾಗಿದೆ. ಯುಗ+ ಆದಿ= ಯುಗಾದಿ . ಯುಗವೆಂದರೆ ಅವಧಿ, ಆದಿ ಎಂದರೆ ಪ್ರಾರಂಭ. ಹೊಸ ಸಂವತ್ಸರದ ಆರಂಭ.

ಪ್ರಕೃತಿಯಲ್ಲಿ ಈ ಪರ್ವ ಕಾಲದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗಿಡಮರಗಳ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿ ಹಲವು ರೀತಿಯ ವ್ಯತ್ಯಾಸ ಗೋಚರವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಶಾಖ ಹೆಚ್ಚಾಗಿ ಇರುವುದರಿಂದ ಅಸಾಧ್ಯವಾದ ಸೆಖೆಯ ಅನುಭವ .
ಯುಗಾದಿಯ ಸುರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆಯು ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.ಹೊಸ ಕನಸುಗಳು , ನಿರೀಕ್ಷೆಗಳು , ಎಲ್ಲವೂ ಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ.

ಈ ಹಬ್ಬ ನಮ್ಮ ನಿತ್ಯ ಜೀವನಕ್ಕೆ ಅಗತ್ಯವಾದ ಚೈತನ್ಯ ವನ್ನು ತುಂಬುತ್ತದೆ. ಈ ಸಂದರ್ಭದಲ್ಲಿನ ಎಲ್ಲಾ ಆಚರಣೆಗಳೂ ಮಹತ್ವದ್ದೇ ಆಗಿದೆ. ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಮಹತ್ವವಿದೆ. ಆದಿನ ನಾವು ಪ್ರಾತಃಕಾಲದಲ್ಲಿ ಮಾಡುವ ಎಣ್ಣೆ ಮೈಗೆ ಹಚ್ಚಿ ಮಾಡುವ ಅಭ್ಯಂಗವಿರಲಿ, ಆದಿನ ವಿಶೇಷವಾದ ಬೇವು ಬೆಲ್ಲದ ಸೇವನೆಯಾಗಿರಲಿ, ಪಂಚಾಂಗ ಶ್ರವಣವಿರಲಿ ಎಲ್ಲವಕ್ಕೂ ಅದರದ್ದೇ ಆದ ಮಹತ್ವವಿದೆ.

ನಮ್ಮ ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ವಿಶೇಷತೆ ಇದೆ. ದೀಪಾವಳಿಯಲ್ಲಿ ಅಭ್ಯಂಗ ವಿಶೇಷವಾದರೆ , ಯುಗಾದಿಯಲ್ಲಿ ಉಣ್ಣುವುದೇ ಹಬ್ಬ. ಹತ್ತು ಹಲವು ತಿನಿಸುಗಳನ್ನು ಮಾಡಿ , ನೆಂಟರಿಷ್ಟರೊಂದಿಗೆ ಹಂಚಿ ತಿನ್ನುವುದು ಯುಗಾದಿಯ ವಿಶೇಷಗಳಲ್ಲಿ ಒಂದು.ಈ ಬಾರಿಯ ಯುಗಾದಿ ನಮ್ಮೆಲ್ಲರಿಗೂ ಹೊಸ ಉಲ್ಲಾಸವನ್ನು ತುಂಬಲಿ, ಬದುಕಿನಲಿ ಕೃತಕತೆ ದೂರವಾಗಿ ಸಹಜತೆಗೆ ಮರಳುವಂತಾಗಲಿ.
# ಶ್ವಿನಿಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago