Advertisement
MIRROR FOCUS

#ಯುಗಾದಿ ಹಬ್ಬದ ಶುಭಾಶಯ | ಬದುಕಿನಲ್ಲಿ ಬೇವು ಬೆಲ್ಲ ತಿನ್ನುತ್ತಾ ಒಳ್ಳೆಯವರಾಗೋಣ, ಒಳ್ಳೆಯದು ಮಾಡೋಣ… |

Share

ಪ್ಲವನಾಮ ಸಂವತ್ಸರವು ಕೊನೆಯಾಗುತ್ತಿರುವ ಸಂದರ್ಭದಲ್ಲಿ, ಶುಭಕೃತ್ ಸಂವತ್ಸರ ಹೊಸ್ತಿಲ್ಲಲ್ಲಿ ಇದ್ದೇವೆ. ಎರಡು ವರ್ಷಗಳಿಂದ ಯುಗಾದಿಯ ಸಂಭ್ರಮಕ್ಕೆ ಕಡಿವಾಣ ಹಾಕಿ ಕೊಂಡು ಕಳೆದಿದ್ದೇವೆ. ಕೊರೋನಾ ಸಮಯದಲ್ಲಿ ಯಾವ ಸಂಭ್ರಮಕ್ಕೂ ಅವಕಾಶವಿರಲಿಲ್ಲ. ಆದರೆ ಈ ಬಾರಿ ಎಲ್ಲವೂ ಮುಕ್ತ ಮುಕ್ತ. ಕೊರೊನಾ ತೀವ್ರತೆ ಕಮ್ಮಿಯಾಗಿದೆ. ಹೊಸ ವರ್ಷದ ಸಂತಸಕ್ಕೆ ಬ್ರೇಕ್ ಇಲ್ಲವೇ ಇಲ್ಲ. ಎಲ್ಲರಿಗೂ ಯುಗಾದಿಯ ಶುಭಾಶಯಗಳು.

ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಈ ಹಬ್ಬವು ಹಿಂದುಗಳ ವರ್ಷಾರಂಭದ ಪವಿತ್ರ ದಿನ. ಯುಗಾದಿ ಎಂದರೆ ನಮಗೆ ಹೊಸವರ್ಷ. ಹೊಸತನಕ್ಕೆ ನಾಂದಿ. ಯುಗಾದಿ ಸಂಸ್ಕೃತ ಶಬ್ದವಾಗಿದೆ. ಯುಗ+ ಆದಿ= ಯುಗಾದಿ . ಯುಗವೆಂದರೆ ಅವಧಿ, ಆದಿ ಎಂದರೆ ಪ್ರಾರಂಭ. ಹೊಸ ಸಂವತ್ಸರದ ಆರಂಭ.

ಪ್ರಕೃತಿಯಲ್ಲಿ ಈ ಪರ್ವ ಕಾಲದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗಿಡಮರಗಳ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿ ಹಲವು ರೀತಿಯ ವ್ಯತ್ಯಾಸ ಗೋಚರವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಶಾಖ ಹೆಚ್ಚಾಗಿ ಇರುವುದರಿಂದ ಅಸಾಧ್ಯವಾದ ಸೆಖೆಯ ಅನುಭವ .
ಯುಗಾದಿಯ ಸುರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆಯು ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.ಹೊಸ ಕನಸುಗಳು , ನಿರೀಕ್ಷೆಗಳು , ಎಲ್ಲವೂ ಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ.

ಈ ಹಬ್ಬ ನಮ್ಮ ನಿತ್ಯ ಜೀವನಕ್ಕೆ ಅಗತ್ಯವಾದ ಚೈತನ್ಯ ವನ್ನು ತುಂಬುತ್ತದೆ. ಈ ಸಂದರ್ಭದಲ್ಲಿನ ಎಲ್ಲಾ ಆಚರಣೆಗಳೂ ಮಹತ್ವದ್ದೇ ಆಗಿದೆ. ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಮಹತ್ವವಿದೆ. ಆದಿನ ನಾವು ಪ್ರಾತಃಕಾಲದಲ್ಲಿ ಮಾಡುವ ಎಣ್ಣೆ ಮೈಗೆ ಹಚ್ಚಿ ಮಾಡುವ ಅಭ್ಯಂಗವಿರಲಿ, ಆದಿನ ವಿಶೇಷವಾದ ಬೇವು ಬೆಲ್ಲದ ಸೇವನೆಯಾಗಿರಲಿ, ಪಂಚಾಂಗ ಶ್ರವಣವಿರಲಿ ಎಲ್ಲವಕ್ಕೂ ಅದರದ್ದೇ ಆದ ಮಹತ್ವವಿದೆ.

ನಮ್ಮ ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ವಿಶೇಷತೆ ಇದೆ. ದೀಪಾವಳಿಯಲ್ಲಿ ಅಭ್ಯಂಗ ವಿಶೇಷವಾದರೆ , ಯುಗಾದಿಯಲ್ಲಿ ಉಣ್ಣುವುದೇ ಹಬ್ಬ. ಹತ್ತು ಹಲವು ತಿನಿಸುಗಳನ್ನು ಮಾಡಿ , ನೆಂಟರಿಷ್ಟರೊಂದಿಗೆ ಹಂಚಿ ತಿನ್ನುವುದು ಯುಗಾದಿಯ ವಿಶೇಷಗಳಲ್ಲಿ ಒಂದು.ಈ ಬಾರಿಯ ಯುಗಾದಿ ನಮ್ಮೆಲ್ಲರಿಗೂ ಹೊಸ ಉಲ್ಲಾಸವನ್ನು ತುಂಬಲಿ, ಬದುಕಿನಲಿ ಕೃತಕತೆ ದೂರವಾಗಿ ಸಹಜತೆಗೆ ಮರಳುವಂತಾಗಲಿ.
# ಶ್ವಿನಿಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

9 minutes ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

24 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago