Advertisement
MIRROR FOCUS

#ಯುಗಾದಿ ಹಬ್ಬದ ಶುಭಾಶಯ | ಬದುಕಿನಲ್ಲಿ ಬೇವು ಬೆಲ್ಲ ತಿನ್ನುತ್ತಾ ಒಳ್ಳೆಯವರಾಗೋಣ, ಒಳ್ಳೆಯದು ಮಾಡೋಣ… |

Share

ಪ್ಲವನಾಮ ಸಂವತ್ಸರವು ಕೊನೆಯಾಗುತ್ತಿರುವ ಸಂದರ್ಭದಲ್ಲಿ, ಶುಭಕೃತ್ ಸಂವತ್ಸರ ಹೊಸ್ತಿಲ್ಲಲ್ಲಿ ಇದ್ದೇವೆ. ಎರಡು ವರ್ಷಗಳಿಂದ ಯುಗಾದಿಯ ಸಂಭ್ರಮಕ್ಕೆ ಕಡಿವಾಣ ಹಾಕಿ ಕೊಂಡು ಕಳೆದಿದ್ದೇವೆ. ಕೊರೋನಾ ಸಮಯದಲ್ಲಿ ಯಾವ ಸಂಭ್ರಮಕ್ಕೂ ಅವಕಾಶವಿರಲಿಲ್ಲ. ಆದರೆ ಈ ಬಾರಿ ಎಲ್ಲವೂ ಮುಕ್ತ ಮುಕ್ತ. ಕೊರೊನಾ ತೀವ್ರತೆ ಕಮ್ಮಿಯಾಗಿದೆ. ಹೊಸ ವರ್ಷದ ಸಂತಸಕ್ಕೆ ಬ್ರೇಕ್ ಇಲ್ಲವೇ ಇಲ್ಲ. ಎಲ್ಲರಿಗೂ ಯುಗಾದಿಯ ಶುಭಾಶಯಗಳು.

ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಈ ಹಬ್ಬವು ಹಿಂದುಗಳ ವರ್ಷಾರಂಭದ ಪವಿತ್ರ ದಿನ. ಯುಗಾದಿ ಎಂದರೆ ನಮಗೆ ಹೊಸವರ್ಷ. ಹೊಸತನಕ್ಕೆ ನಾಂದಿ. ಯುಗಾದಿ ಸಂಸ್ಕೃತ ಶಬ್ದವಾಗಿದೆ. ಯುಗ+ ಆದಿ= ಯುಗಾದಿ . ಯುಗವೆಂದರೆ ಅವಧಿ, ಆದಿ ಎಂದರೆ ಪ್ರಾರಂಭ. ಹೊಸ ಸಂವತ್ಸರದ ಆರಂಭ.

ಪ್ರಕೃತಿಯಲ್ಲಿ ಈ ಪರ್ವ ಕಾಲದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಗಿಡಮರಗಳ ಎಲೆಗಳು ಉದುರಿ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿ ಹಲವು ರೀತಿಯ ವ್ಯತ್ಯಾಸ ಗೋಚರವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಶಾಖ ಹೆಚ್ಚಾಗಿ ಇರುವುದರಿಂದ ಅಸಾಧ್ಯವಾದ ಸೆಖೆಯ ಅನುಭವ .
ಯುಗಾದಿಯ ಸುರ್ಯೋದಯವು ಹೊಸ ವರ್ಷದ ಪ್ರಾರಂಭವಾಗಿದೆ. ಯಾಕೆಂದರೆ ಭೂಮಿಯು ಸೂರ್ಯನ ಸುತ್ತ ಸುತ್ತುವಿಕೆಯು ಒಂದು ಯುಗಾದಿಯಿಂದ ಇನ್ನೊಂದು ಯುಗಾದಿಗೆ ಒಮ್ಮೆ ಪೂರ್ಣಗೊಂಡಿರುತ್ತದೆ.ಹೊಸ ಕನಸುಗಳು , ನಿರೀಕ್ಷೆಗಳು , ಎಲ್ಲವೂ ಚಿಗುರುವ ಸಂಭ್ರಮ. ಮನೆ ಮನದಲ್ಲಿ ನವಚೈತನ್ಯ ತುಂಬುವ ಕಾಲ. ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ.

ಈ ಹಬ್ಬ ನಮ್ಮ ನಿತ್ಯ ಜೀವನಕ್ಕೆ ಅಗತ್ಯವಾದ ಚೈತನ್ಯ ವನ್ನು ತುಂಬುತ್ತದೆ. ಈ ಸಂದರ್ಭದಲ್ಲಿನ ಎಲ್ಲಾ ಆಚರಣೆಗಳೂ ಮಹತ್ವದ್ದೇ ಆಗಿದೆ. ಪ್ರತಿಯೊಂದು ಆಚರಣೆಗೂ ವೈಜ್ಞಾನಿಕ ಮಹತ್ವವಿದೆ. ಆದಿನ ನಾವು ಪ್ರಾತಃಕಾಲದಲ್ಲಿ ಮಾಡುವ ಎಣ್ಣೆ ಮೈಗೆ ಹಚ್ಚಿ ಮಾಡುವ ಅಭ್ಯಂಗವಿರಲಿ, ಆದಿನ ವಿಶೇಷವಾದ ಬೇವು ಬೆಲ್ಲದ ಸೇವನೆಯಾಗಿರಲಿ, ಪಂಚಾಂಗ ಶ್ರವಣವಿರಲಿ ಎಲ್ಲವಕ್ಕೂ ಅದರದ್ದೇ ಆದ ಮಹತ್ವವಿದೆ.

ನಮ್ಮ ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ವಿಶೇಷತೆ ಇದೆ. ದೀಪಾವಳಿಯಲ್ಲಿ ಅಭ್ಯಂಗ ವಿಶೇಷವಾದರೆ , ಯುಗಾದಿಯಲ್ಲಿ ಉಣ್ಣುವುದೇ ಹಬ್ಬ. ಹತ್ತು ಹಲವು ತಿನಿಸುಗಳನ್ನು ಮಾಡಿ , ನೆಂಟರಿಷ್ಟರೊಂದಿಗೆ ಹಂಚಿ ತಿನ್ನುವುದು ಯುಗಾದಿಯ ವಿಶೇಷಗಳಲ್ಲಿ ಒಂದು.ಈ ಬಾರಿಯ ಯುಗಾದಿ ನಮ್ಮೆಲ್ಲರಿಗೂ ಹೊಸ ಉಲ್ಲಾಸವನ್ನು ತುಂಬಲಿ, ಬದುಕಿನಲಿ ಕೃತಕತೆ ದೂರವಾಗಿ ಸಹಜತೆಗೆ ಮರಳುವಂತಾಗಲಿ.
# ಶ್ವಿನಿಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago