Advertisement
MIRROR FOCUS

ಯುಗಾದಿ ಹಾಗೂ ವಿಷು | ಶಾರ್ವರಿಯಿಂದ ಪ್ಲವ ಸಂವತ್ಸರ | ವಿಪ್ಲವಗಳು ದೂರವಾಗಲಿ- ಸರ್ವರಿಗೂ ನೆಮ್ಮದಿಯಾಗಲಿ |

Share

ಜೊತೆ ಜೊತೆಗೇ ಬಂದ ಹೊಸವರ್ಷದ ಹಬ್ಬಗಳಿಗೆ ಶುಭಾಶಯ.

Advertisement
Advertisement
Advertisement
Advertisement

ಯುಗಾದಿಯ ಬೇವು ಬೆಲ್ಲದ ಸವಿ, ವಿಷುವಿನ  ಕಣಿ ವೈಭವ ಎರಡು ಒಂದು ದಿನ ವ್ಯತ್ಯಾಸದಲ್ಲಿ  ಬಂದಿವೆ. ಯುಗಾದಿ, ವಿಷು  ಎರಡೂ  ನಮಗೆ ಹೊಸವರುಷದ ಸಂಭ್ರಮವೇ. ಕೆಲವೆಡೆ ಚಾಂದ್ರಮಾನ ಯುಗಾದಿಯ ಆಚರಣೆಯಾದರೆ ಉಳಿದೆಡೆಯಲ್ಲಿ ಸೌರಮಾನ ಯುಗಾದಿ ( ಬಿಸು)ವಿಗೆ  ಪ್ರಾಮುಖ್ಯತೆ.

Advertisement

ಯುಗಾದಿ   ಹಬ್ಬ ಬಂತೆಂದರೆ ಎಲ್ಲೆಲ್ಲೂ ಸಂತೋಷ, ಸಡಗರ ಅದರ ತಯಾರಿಯೇ ಬಲು ಜೋರು.  ಆದರೆ ಬೇರೆಲ್ಲ ಏನೇ ಗೌಜಿ ಗದ್ದಲಗಳಿದ್ದರೂ ಮುಖ್ಯ  ಪಾತ್ರ ವಹಿಸುವುದು ಬೇವು , ಬೆಲ್ಲ. ಬದುಕಿನಲ್ಲಿ  ಬೇವಿನ ಕಹಿ, ಬೆಲ್ಲದ ಸಿಹಿ ಎರಡನ್ನೂ  ಸಮಾನವಾಗಿ ಸ್ವೀಕರಿಸುವ ಮನೋಧರ್ಮವನ್ನು ಪ್ರತಿನಿಧಿಸುತ್ತವೆ.  ಬೆಲ್ಲದ ಸಿಹಿಯನ್ನು  ಸುಲಭವಾಗಿ, ಸಹಜವಾಗಿ ಸ್ವೀಕರಿಸಿದ ಮನಸು ಬೇವಿನ ಕಹಿಯನ್ನು  ಇಷ್ಟಪಡದು. ಆದರೆ ಬದುಕೆಂದರೆ  ಕಷ್ಟ , ಸುಖಗಳೆರಡೂ ಇರುತ್ತವೆ, ಒಂದೇ  ನಾಣ್ಯದ ಎರಡು ಮುಖಗಳಿದ್ದಂತೆ.  ಹೇಗೆ  ಯುಗಾದಿ ಬಂದಾಗ ಮರಗಳೆಲ್ಲ ಎಲೆಗಳನ್ನು ಉದುರಿಸಿ ಹೊಸ ಚಿಗುರುಗಳಿಂದ ಕಂಗೊಳಿಸುತ್ತವೆಯೋ  ಹಾಗೇ ಮನುಜರೂ ಕೂಡ. ಬಂದ ಕಷ್ಟಗಳನ್ನು  ಎದುರಿಸಿ ಮುನ್ನಡೆಯಲು  ಬರುವ ಹೊಸ ಸಂವತ್ಸರ ನಾಂದಿಯಾಗಲಿ.

ಶಾರ್ವರಿಯ ಶಬ್ದಾರ್ಥ ಕತ್ತಲು ,ಬರುವ  ಸಂವತ್ಸರ  ‘ಪ್ಲವ’ ದ ಅರ್ಥ ತೆಪ್ಪ, ದೋಣಿ .
ಶಾರ್ವರಿ ಸಂವತ್ಸರದಲ್ಲಿದ್ದ ಕೊರೊನಾ ದ  ಕಪಿಮುಷ್ಠಿಯಿಂದ ಪ್ಲವ ಸಂವತ್ಸರದಲ್ಲಿ ಬಿಡುಗಡೆ ದೊರೆಯ ಬಹುದೆಂಬ ನಿರೀಕ್ಷೆಯೊಂದಿಗೆ.
ವಿಷು ಅಥವಾ ಬಿಸುವಿನ ಪ್ರಮುಖ ಆಕರ್ಷಣೆಯೇ ವಿಷು ಕಣಿ.‌  ತರಕಾರಿ , ಹಣ್ಣುಗಳು, ತೆಂಗಿನಕಾಯಿ, ಅಕ್ಕಿ,  ಕನ್ನಡಿ, ಬೆಳ್ಳಿ ಬಂಗಾರ, ನಾಣ್ಯ, ವೀಳ್ಯದೆಲೆ, ಅಡಿಕೆ ಮೊದಲಾದ ಸಾಮಗ್ರಿಗಳನ್ನು ಹಿಂದಿನ ದಿನವೇ ದೇವರ ಕೋಣೆಯಲ್ಲಿ ಸರಿ ಮಾಡಿ ಇಡಲಾಗುತ್ತೆ.  ಇದಕ್ಕೇ ವಿಷುಕಣಿಯೆಂದು ಹೆಸರು. ನಮ್ಮ ಸಮೃದ್ಧಿಯ  ಸಂಕೇತ ಈ ವಿಷುಕಣಿ.  ಬೆಳಗ್ಗೆ ಎದ್ದ ಕೂಡಲೇ  ಮೊದಲು  ಕಣ್ತೆರೆಯುವುದು ವಿಷುಕಣಿಯ ಮುಂದೆಯೇ. ಮುಂಜಾನೆಯೇ  ಎದ್ದು ಸೀದಾ ದೇವರ ಕೋಣೆಗೆ  ಬಂದು ವಿಷು ಕಣಿಯನ್ನು ಕಣ್ತುಂಬಿಸಿಕೊಂಡು ನಮಸ್ಕರಿಸಿ ಮುಂದಿನ ಕಾರ್ಯಕ್ಕೆ ಸಜ್ಜಾಗುವುದು ನಮ್ಮ ದಕ್ಷಿಣಕನ್ನಡ, ಉಡುಪಿ ಕಾಸರಗೋಡು ಮೊದಲಾದ ಜಿಲ್ಲೆಗಳ ಜನರು ಪಾಲಿಸಿಕೊಂಡು ಬಂದ ಪದ್ಧತಿ.

Advertisement

ಈ ಪ್ಲವ ಸಂವತ್ಸರವು  ವಿಶ್ವಕ್ಕೇ ಹಬ್ಬಿದ ವೈರಸ್ ನ ಕತ್ತಲೆಯನ್ನು ಹೊಡೆದೋಡಿಸಿ ಜಗತ್ತಿಗೆ ಹೊಸ ಅಧ್ಯಾಯದ ನಾಂದಿಗೆ ಎಂಬ ಆಶಯದೊಂದಿಗೆ ಶುಭಹಾರೈಕೆ.

ಯುಗಾದಿ ಹಾಗೂ ವಿಷುವಿನ ಶುಭಾಶಯಗಳು.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

9 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

15 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago