Advertisement
MIRROR FOCUS

ಯುಗಾದಿ ಹಾಗೂ ವಿಷು | ಶಾರ್ವರಿಯಿಂದ ಪ್ಲವ ಸಂವತ್ಸರ | ವಿಪ್ಲವಗಳು ದೂರವಾಗಲಿ- ಸರ್ವರಿಗೂ ನೆಮ್ಮದಿಯಾಗಲಿ |

Share

ಜೊತೆ ಜೊತೆಗೇ ಬಂದ ಹೊಸವರ್ಷದ ಹಬ್ಬಗಳಿಗೆ ಶುಭಾಶಯ.

ಯುಗಾದಿಯ ಬೇವು ಬೆಲ್ಲದ ಸವಿ, ವಿಷುವಿನ  ಕಣಿ ವೈಭವ ಎರಡು ಒಂದು ದಿನ ವ್ಯತ್ಯಾಸದಲ್ಲಿ  ಬಂದಿವೆ. ಯುಗಾದಿ, ವಿಷು  ಎರಡೂ  ನಮಗೆ ಹೊಸವರುಷದ ಸಂಭ್ರಮವೇ. ಕೆಲವೆಡೆ ಚಾಂದ್ರಮಾನ ಯುಗಾದಿಯ ಆಚರಣೆಯಾದರೆ ಉಳಿದೆಡೆಯಲ್ಲಿ ಸೌರಮಾನ ಯುಗಾದಿ ( ಬಿಸು)ವಿಗೆ  ಪ್ರಾಮುಖ್ಯತೆ.

ಯುಗಾದಿ   ಹಬ್ಬ ಬಂತೆಂದರೆ ಎಲ್ಲೆಲ್ಲೂ ಸಂತೋಷ, ಸಡಗರ ಅದರ ತಯಾರಿಯೇ ಬಲು ಜೋರು.  ಆದರೆ ಬೇರೆಲ್ಲ ಏನೇ ಗೌಜಿ ಗದ್ದಲಗಳಿದ್ದರೂ ಮುಖ್ಯ  ಪಾತ್ರ ವಹಿಸುವುದು ಬೇವು , ಬೆಲ್ಲ. ಬದುಕಿನಲ್ಲಿ  ಬೇವಿನ ಕಹಿ, ಬೆಲ್ಲದ ಸಿಹಿ ಎರಡನ್ನೂ  ಸಮಾನವಾಗಿ ಸ್ವೀಕರಿಸುವ ಮನೋಧರ್ಮವನ್ನು ಪ್ರತಿನಿಧಿಸುತ್ತವೆ.  ಬೆಲ್ಲದ ಸಿಹಿಯನ್ನು  ಸುಲಭವಾಗಿ, ಸಹಜವಾಗಿ ಸ್ವೀಕರಿಸಿದ ಮನಸು ಬೇವಿನ ಕಹಿಯನ್ನು  ಇಷ್ಟಪಡದು. ಆದರೆ ಬದುಕೆಂದರೆ  ಕಷ್ಟ , ಸುಖಗಳೆರಡೂ ಇರುತ್ತವೆ, ಒಂದೇ  ನಾಣ್ಯದ ಎರಡು ಮುಖಗಳಿದ್ದಂತೆ.  ಹೇಗೆ  ಯುಗಾದಿ ಬಂದಾಗ ಮರಗಳೆಲ್ಲ ಎಲೆಗಳನ್ನು ಉದುರಿಸಿ ಹೊಸ ಚಿಗುರುಗಳಿಂದ ಕಂಗೊಳಿಸುತ್ತವೆಯೋ  ಹಾಗೇ ಮನುಜರೂ ಕೂಡ. ಬಂದ ಕಷ್ಟಗಳನ್ನು  ಎದುರಿಸಿ ಮುನ್ನಡೆಯಲು  ಬರುವ ಹೊಸ ಸಂವತ್ಸರ ನಾಂದಿಯಾಗಲಿ.

ಶಾರ್ವರಿಯ ಶಬ್ದಾರ್ಥ ಕತ್ತಲು ,ಬರುವ  ಸಂವತ್ಸರ  ‘ಪ್ಲವ’ ದ ಅರ್ಥ ತೆಪ್ಪ, ದೋಣಿ .
ಶಾರ್ವರಿ ಸಂವತ್ಸರದಲ್ಲಿದ್ದ ಕೊರೊನಾ ದ  ಕಪಿಮುಷ್ಠಿಯಿಂದ ಪ್ಲವ ಸಂವತ್ಸರದಲ್ಲಿ ಬಿಡುಗಡೆ ದೊರೆಯ ಬಹುದೆಂಬ ನಿರೀಕ್ಷೆಯೊಂದಿಗೆ.
ವಿಷು ಅಥವಾ ಬಿಸುವಿನ ಪ್ರಮುಖ ಆಕರ್ಷಣೆಯೇ ವಿಷು ಕಣಿ.‌  ತರಕಾರಿ , ಹಣ್ಣುಗಳು, ತೆಂಗಿನಕಾಯಿ, ಅಕ್ಕಿ,  ಕನ್ನಡಿ, ಬೆಳ್ಳಿ ಬಂಗಾರ, ನಾಣ್ಯ, ವೀಳ್ಯದೆಲೆ, ಅಡಿಕೆ ಮೊದಲಾದ ಸಾಮಗ್ರಿಗಳನ್ನು ಹಿಂದಿನ ದಿನವೇ ದೇವರ ಕೋಣೆಯಲ್ಲಿ ಸರಿ ಮಾಡಿ ಇಡಲಾಗುತ್ತೆ.  ಇದಕ್ಕೇ ವಿಷುಕಣಿಯೆಂದು ಹೆಸರು. ನಮ್ಮ ಸಮೃದ್ಧಿಯ  ಸಂಕೇತ ಈ ವಿಷುಕಣಿ.  ಬೆಳಗ್ಗೆ ಎದ್ದ ಕೂಡಲೇ  ಮೊದಲು  ಕಣ್ತೆರೆಯುವುದು ವಿಷುಕಣಿಯ ಮುಂದೆಯೇ. ಮುಂಜಾನೆಯೇ  ಎದ್ದು ಸೀದಾ ದೇವರ ಕೋಣೆಗೆ  ಬಂದು ವಿಷು ಕಣಿಯನ್ನು ಕಣ್ತುಂಬಿಸಿಕೊಂಡು ನಮಸ್ಕರಿಸಿ ಮುಂದಿನ ಕಾರ್ಯಕ್ಕೆ ಸಜ್ಜಾಗುವುದು ನಮ್ಮ ದಕ್ಷಿಣಕನ್ನಡ, ಉಡುಪಿ ಕಾಸರಗೋಡು ಮೊದಲಾದ ಜಿಲ್ಲೆಗಳ ಜನರು ಪಾಲಿಸಿಕೊಂಡು ಬಂದ ಪದ್ಧತಿ.

ಈ ಪ್ಲವ ಸಂವತ್ಸರವು  ವಿಶ್ವಕ್ಕೇ ಹಬ್ಬಿದ ವೈರಸ್ ನ ಕತ್ತಲೆಯನ್ನು ಹೊಡೆದೋಡಿಸಿ ಜಗತ್ತಿಗೆ ಹೊಸ ಅಧ್ಯಾಯದ ನಾಂದಿಗೆ ಎಂಬ ಆಶಯದೊಂದಿಗೆ ಶುಭಹಾರೈಕೆ.

ಯುಗಾದಿ ಹಾಗೂ ವಿಷುವಿನ ಶುಭಾಶಯಗಳು.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

14 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago