ವಿಶೇಷ ವರದಿಗಳು

ಸುಬ್ರಹ್ಮಣ್ಯದಲ್ಲಿ ಅಂಬುಲೆನ್ಸ್‌ ಸೇವೆ ಲೋಕಾರ್ಪಣೆ | ಒಂದು ತಿಂಗಳಲ್ಲಿ ಯೋಜನೆ ಪೂರೈಸಿದ “ಯುವತೇಜಸ್ಸು” | ಸಾಬೀತಾದ ಯುವಶಕ್ತಿಯ “ತೇಜಸ್ಸು” |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಸಡಗರ. ಈ ನಡುವೆ ಯುವಶಕ್ತಿಯ ತೇಜಸ್ಸು ಎಲ್ಲೆಡೆಯೂ ಕಂಡಿತು. ಅದು ಆರೋಗ್ಯದ ಸೇವೆಯ ಮೂಲಕ…!. ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆಯ ಕಾರ್ಯಕ್ರಮ ಅದು. ಆಧ್ಯಾತ್ಮ ಗುರು ವಿನಯ ಗುರೂಜಿ ಅವರು ಅಂಬುಲೆನ್ಸ್‌ ಸೇವೆ ಲೋಕಾರ್ಪಣೆ ಮಾಡಿದರು.ಯುವತೇಜಸ್ಸಿನಿಂದ ಇದು ಎರಡನೇ ಅಂಬುಲೆನ್ಸ್‌ ಸೇವೆ.

Advertisement
Advertisement

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ಒಂದಿಷ್ಟು ಸಮಾಜಕ್ಕಾಗಿ ಎಂಬ ಧ್ಯೇಯೋದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಇದೀಗ ಯುವತೇಜಸ್ಸು  ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆಯು ಪವಿತ್ರ ಷಷ್ಠಿಯ ದಿನದಂದು  ಲೋಕಾರ್ಪಣೆಗೊಂಡಿತು. ಯುವ ತೇಜಸ್ಸು ಬಳಗ ಇದುವರೆಗೆ ನೂರಾರು ಜನರ ನೋವಿಗೆ ಸ್ಪಂದಿಸಿ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ.ಇದೀಗ ಅಂಬುಲೆನ್ಸ್‌ ಸೇವೆಯ ಮೂಲಕ ಸಮಾಜಕ್ಕೆ ಬೆಳಕಾಗಿದೆ.

ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೊಂದು ಅಂಬ್ಯುಲೆನ್ಸ್ ಯೋಜನೆಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಯುವ ತೇಜಸ್ಸಿನ ಎಲ್ಲಾ ಸದಸ್ಯರು ಒಂದಾಗಿ ಕೆಲಸ ಮಾಡಿದರು. ಅನೇಕ ದಾನಿಗಳು ಯುವ ತೇಜಸ್ಸಿನ ಪರವಾಗಿ ನಿಂತರು. ಹೀಗಾಗಿ ಅತಿ ಶೀಘ್ರದಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಾಯಿತು.ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ನ ಸೇವೆ ಪಡೆಯಬಹುದಾಗಿದೆ.

Advertisement

ನೂತನ ಸೇವೆಯನ್ನು ಆಧ್ಯಾತ್ಮ ಗುರು  ವಿನಯ್ ಗುರೂಜಿ ಅವರು ಆಂಬ್ಯುಲೆನ್ಸ್ ಚಲಾಯಿಸಿ ಶುಭಾರ್ಶೀವಾದ ಮಾಡಿದರು.

ಈ ಸಂದರ್ಭ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರವಹಣಾಧಿಕಾರಿ ನಿಂಗಯ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ. ರಂಗಯ್ಯ ಶೆಟ್ಟಿಗಾರ್ , ಉದ್ಯಮಿ ರವಿ ಕಕ್ಕೆಪದವು ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರಿನ ಎಸ್‌ಆರ್‌ಕೆ ಲಾಡರ್ಸ ಮಾಲಕರು  ಕೇಶವ ಎ., ಶಿವಕುಮಾರ್ ಹೊಸೊಳಿಕೆ, ಅಶೋಕ್ ನೆಕ್ರಾಜೆ ಮೊದಲಾದವರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಇದ್ದರು.

Koo App

#ಯುವತೇಜಸ್ಸು ವತಿಯಿಂದ #ಕುಕ್ಕೆಸುಬ್ರಹ್ಮಣ್ಯ ದಲ್ಲಿ #ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು. #ವಿನಯಗುರೂಜಿ‌ ಅವರು ಚಾಲನೆ‌ ನೀಡಿದರು. #Ambulance service was launched at #Kukkesubramanya by #Yuvatejas. #Vinayagurujee inagurated Ambulance service.

Advertisement

The Rural Mirror (@ruralmirror) 9 Dec 2021

ಗ್ರಾಮ ಪಂಚಾಯತು ಸದಸ್ಯರುಗಳಾದ ಎಚ್‌.ಎಲ್. ವೆಂಕಟೇಶ್ ಹಾಗೂ  ಭಾರತಿ ದಿನೇಶ್, ವಿಮಲಾ ರಂಗಯ್ಯ, ಪುಷ್ಷಾ ಡಿ ಕಾನತ್ತೂರು,  ಶ್ಯಾಮಲ ಕಲ್ಲಾಜೆ ಉಪಸ್ಥಿತರಿದ್ದರು.

ಅಶ್ವಮೇಧ,ಯುವ ಬ್ರಿಗೇಡ್,ಗಾಂಗೇಯ ಕ್ರಿಕೆಟರ್ಸ್,ಜೆಸಿಐ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಶ್ರೀರಾಮ್ ಕ್ರಿಕೆಟರ್ಸ್ ದೇವರಹಳ್ಳಿ, ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲ್ಹಕರು, ವರ್ತಕರ ಸಂಘದ ಪದಾಧಿಕಾರಿಗಳು,
ಕುಕ್ಕೆಶ್ರೀ ಅಟೋ ಚಾಲಕ ಮಾಲಕರು, ತುಳುವಪ್ಪೆ ಜೋಕುಲು ವಾಟ್ಸಾಪ್ ಗ್ರೂಪ್, ಬಿ.ಎಮ್.ಎಸ್ ಅಟೋ ಚಾಲಕ ಮಾಲಕರು ಇದರ ಪದಾಧಿಕಾರಿಗಳು,ಯುವ ತೇಜಸ್ಸಿನ ಸದಸ್ಯರು ಹಾಗೂ ದಾನಿಗಳು ಮತ್ತು ಹಿತೈಷಿಗಳು  ಜೊತೆಯಲ್ಲಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

14 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

18 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

18 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

23 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago