Advertisement
ವಿಶೇಷ ವರದಿಗಳು

ಸುಬ್ರಹ್ಮಣ್ಯದಲ್ಲಿ ಅಂಬುಲೆನ್ಸ್‌ ಸೇವೆ ಲೋಕಾರ್ಪಣೆ | ಒಂದು ತಿಂಗಳಲ್ಲಿ ಯೋಜನೆ ಪೂರೈಸಿದ “ಯುವತೇಜಸ್ಸು” | ಸಾಬೀತಾದ ಯುವಶಕ್ತಿಯ “ತೇಜಸ್ಸು” |

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಸಡಗರ. ಈ ನಡುವೆ ಯುವಶಕ್ತಿಯ ತೇಜಸ್ಸು ಎಲ್ಲೆಡೆಯೂ ಕಂಡಿತು. ಅದು ಆರೋಗ್ಯದ ಸೇವೆಯ ಮೂಲಕ…!. ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆಯ ಕಾರ್ಯಕ್ರಮ ಅದು. ಆಧ್ಯಾತ್ಮ ಗುರು ವಿನಯ ಗುರೂಜಿ ಅವರು ಅಂಬುಲೆನ್ಸ್‌ ಸೇವೆ ಲೋಕಾರ್ಪಣೆ ಮಾಡಿದರು.ಯುವತೇಜಸ್ಸಿನಿಂದ ಇದು ಎರಡನೇ ಅಂಬುಲೆನ್ಸ್‌ ಸೇವೆ.

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ಒಂದಿಷ್ಟು ಸಮಾಜಕ್ಕಾಗಿ ಎಂಬ ಧ್ಯೇಯೋದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಇದೀಗ ಯುವತೇಜಸ್ಸು  ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆಯು ಪವಿತ್ರ ಷಷ್ಠಿಯ ದಿನದಂದು  ಲೋಕಾರ್ಪಣೆಗೊಂಡಿತು. ಯುವ ತೇಜಸ್ಸು ಬಳಗ ಇದುವರೆಗೆ ನೂರಾರು ಜನರ ನೋವಿಗೆ ಸ್ಪಂದಿಸಿ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ.ಇದೀಗ ಅಂಬುಲೆನ್ಸ್‌ ಸೇವೆಯ ಮೂಲಕ ಸಮಾಜಕ್ಕೆ ಬೆಳಕಾಗಿದೆ.

ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೊಂದು ಅಂಬ್ಯುಲೆನ್ಸ್ ಯೋಜನೆಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಯುವ ತೇಜಸ್ಸಿನ ಎಲ್ಲಾ ಸದಸ್ಯರು ಒಂದಾಗಿ ಕೆಲಸ ಮಾಡಿದರು. ಅನೇಕ ದಾನಿಗಳು ಯುವ ತೇಜಸ್ಸಿನ ಪರವಾಗಿ ನಿಂತರು. ಹೀಗಾಗಿ ಅತಿ ಶೀಘ್ರದಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಾಯಿತು.ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ನ ಸೇವೆ ಪಡೆಯಬಹುದಾಗಿದೆ.

ನೂತನ ಸೇವೆಯನ್ನು ಆಧ್ಯಾತ್ಮ ಗುರು  ವಿನಯ್ ಗುರೂಜಿ ಅವರು ಆಂಬ್ಯುಲೆನ್ಸ್ ಚಲಾಯಿಸಿ ಶುಭಾರ್ಶೀವಾದ ಮಾಡಿದರು.

ಈ ಸಂದರ್ಭ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರವಹಣಾಧಿಕಾರಿ ನಿಂಗಯ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ. ರಂಗಯ್ಯ ಶೆಟ್ಟಿಗಾರ್ , ಉದ್ಯಮಿ ರವಿ ಕಕ್ಕೆಪದವು ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರಿನ ಎಸ್‌ಆರ್‌ಕೆ ಲಾಡರ್ಸ ಮಾಲಕರು  ಕೇಶವ ಎ., ಶಿವಕುಮಾರ್ ಹೊಸೊಳಿಕೆ, ಅಶೋಕ್ ನೆಕ್ರಾಜೆ ಮೊದಲಾದವರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಇದ್ದರು.

ಗ್ರಾಮ ಪಂಚಾಯತು ಸದಸ್ಯರುಗಳಾದ ಎಚ್‌.ಎಲ್. ವೆಂಕಟೇಶ್ ಹಾಗೂ  ಭಾರತಿ ದಿನೇಶ್, ವಿಮಲಾ ರಂಗಯ್ಯ, ಪುಷ್ಷಾ ಡಿ ಕಾನತ್ತೂರು,  ಶ್ಯಾಮಲ ಕಲ್ಲಾಜೆ ಉಪಸ್ಥಿತರಿದ್ದರು.

ಅಶ್ವಮೇಧ,ಯುವ ಬ್ರಿಗೇಡ್,ಗಾಂಗೇಯ ಕ್ರಿಕೆಟರ್ಸ್,ಜೆಸಿಐ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಶ್ರೀರಾಮ್ ಕ್ರಿಕೆಟರ್ಸ್ ದೇವರಹಳ್ಳಿ, ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲ್ಹಕರು, ವರ್ತಕರ ಸಂಘದ ಪದಾಧಿಕಾರಿಗಳು,
ಕುಕ್ಕೆಶ್ರೀ ಅಟೋ ಚಾಲಕ ಮಾಲಕರು, ತುಳುವಪ್ಪೆ ಜೋಕುಲು ವಾಟ್ಸಾಪ್ ಗ್ರೂಪ್, ಬಿ.ಎಮ್.ಎಸ್ ಅಟೋ ಚಾಲಕ ಮಾಲಕರು ಇದರ ಪದಾಧಿಕಾರಿಗಳು,ಯುವ ತೇಜಸ್ಸಿನ ಸದಸ್ಯರು ಹಾಗೂ ದಾನಿಗಳು ಮತ್ತು ಹಿತೈಷಿಗಳು  ಜೊತೆಯಲ್ಲಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

23 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago