#ZeroShadowDay | ಆ.18 ರಂದು ಶೂನ್ಯ ನೆರಳು ದಿನ | ಖಗೋಳದ ಅಪರೂಪದ ವಿದ್ಯಮಾನ |

August 17, 2023
9:36 PM
ಆ.18 ರಂದು ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ. ರಾಜ್ಯದ ಹಲವು ಕಡೆ ಈ ಅಪರೂಪದ ವಿದ್ಯಮಾನ ವೀಕ್ಷಣೆಗೆ ಸಾಧ್ಯತೆ ಇದೆ.

ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಆ.18 ರಂದು ಈ ಅಪರೂಪದ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ. ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಈ ವಿದ್ಯಮಾನ ನಡೆದಿತ್ತು. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ.

Advertisement

ಬೆಂಗಳೂರು ನಗರವು 2023 ರಲ್ಲಿ ಎರಡನೇ ಬಾರಿಗೆ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಸಜ್ಜಾಗಿದೆ. ಈ ವಿಶಿಷ್ಟ ಘಟನೆಯು ಆಗಸ್ಟ್ 18 ರಂದು ನಡೆಯಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸುತ್ತದೆ.ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

ಶೂನ್ಯ ನೆರಳು ದಿನವು +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುವ ಖಗೋಳ ವಿದ್ಯಮಾನವಾಗಿದೆ. ಅಂದರೆ ನಿಖರವಾಗಿ 12:24  ಕ್ಕೆ, ಸೂರ್ಯನನ್ನು ನೇರವಾಗಿ ತಲೆಯ ಮೇಲೆ ಬರುತ್ತಾನೆ. ಈ ಸಮಯದಲ್ಲಿ ಯಾವುದೇ ಸ್ಥಾಯಿ ವಸ್ತು, ಒಬ್ಬ ವ್ಯಕ್ತಿ ಅಥವಾ ಯಾವುದೇ ವಸ್ತುವಿನ ನೆರಳು ನೆಲದ ಮೇಲೆ ಬೀಳುವುದಿಲ್ಲ.

ಈ ಬಾರಿ ಈಗಾಗಲೇ ಏಪ್ರಿಲ್‌ ತಿಂಗಳಲ್ಲಿ ಈ ವಿದ್ಯಮಾನಕ್ಕೆ ಬೆಂಗಳೂರಿನ ಜನರು ಸಾಕ್ಷಿಯಾಗಿದ್ದರು. ಈ ವರ್ಷದ ಎರಡನೇ ಬಾರಿಯ ಈ ವಿದ್ಯಮಾನ ಆಗಸ್ಟ್‌ 18ರಂದು ಸಂಭವಿಸಲಿದೆ. ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ವ್ಯತ್ಯಾಸದಲ್ಲಿ ಈ ಬೆಳವಣಿಗೆ ನಡೆಯುತ್ತದೆ. ದಕ್ಷಿಣಾಯನ ಹಾಗೂ ಉತ್ತರಾಯಣದಲ್ಲಿ ತಲಾ 1 ಬಾರಿ ಶೂನ್ಯ ನೆರಳಿನ ದಿನ ಬರುತ್ತದೆ  ಎಂದು ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಹೇಳುತ್ತದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror