Advertisement
ಸುದ್ದಿಗಳು

#ZeroShadowDay | ಆ.18 ರಂದು ಶೂನ್ಯ ನೆರಳು ದಿನ | ಖಗೋಳದ ಅಪರೂಪದ ವಿದ್ಯಮಾನ |

Share

ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಆ.18 ರಂದು ಈ ಅಪರೂಪದ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ. ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಈ ವಿದ್ಯಮಾನ ನಡೆದಿತ್ತು. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ.

Advertisement

ಬೆಂಗಳೂರು ನಗರವು 2023 ರಲ್ಲಿ ಎರಡನೇ ಬಾರಿಗೆ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಸಜ್ಜಾಗಿದೆ. ಈ ವಿಶಿಷ್ಟ ಘಟನೆಯು ಆಗಸ್ಟ್ 18 ರಂದು ನಡೆಯಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸುತ್ತದೆ.ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

ಶೂನ್ಯ ನೆರಳು ದಿನವು +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುವ ಖಗೋಳ ವಿದ್ಯಮಾನವಾಗಿದೆ. ಅಂದರೆ ನಿಖರವಾಗಿ 12:24  ಕ್ಕೆ, ಸೂರ್ಯನನ್ನು ನೇರವಾಗಿ ತಲೆಯ ಮೇಲೆ ಬರುತ್ತಾನೆ. ಈ ಸಮಯದಲ್ಲಿ ಯಾವುದೇ ಸ್ಥಾಯಿ ವಸ್ತು, ಒಬ್ಬ ವ್ಯಕ್ತಿ ಅಥವಾ ಯಾವುದೇ ವಸ್ತುವಿನ ನೆರಳು ನೆಲದ ಮೇಲೆ ಬೀಳುವುದಿಲ್ಲ.

ಈ ಬಾರಿ ಈಗಾಗಲೇ ಏಪ್ರಿಲ್‌ ತಿಂಗಳಲ್ಲಿ ಈ ವಿದ್ಯಮಾನಕ್ಕೆ ಬೆಂಗಳೂರಿನ ಜನರು ಸಾಕ್ಷಿಯಾಗಿದ್ದರು. ಈ ವರ್ಷದ ಎರಡನೇ ಬಾರಿಯ ಈ ವಿದ್ಯಮಾನ ಆಗಸ್ಟ್‌ 18ರಂದು ಸಂಭವಿಸಲಿದೆ. ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ವ್ಯತ್ಯಾಸದಲ್ಲಿ ಈ ಬೆಳವಣಿಗೆ ನಡೆಯುತ್ತದೆ. ದಕ್ಷಿಣಾಯನ ಹಾಗೂ ಉತ್ತರಾಯಣದಲ್ಲಿ ತಲಾ 1 ಬಾರಿ ಶೂನ್ಯ ನೆರಳಿನ ದಿನ ಬರುತ್ತದೆ  ಎಂದು ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಹೇಳುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

15 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago