ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಆ.18 ರಂದು ಈ ಅಪರೂಪದ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ. ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಈ ವಿದ್ಯಮಾನ ನಡೆದಿತ್ತು. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ.
ಬೆಂಗಳೂರು ನಗರವು 2023 ರಲ್ಲಿ ಎರಡನೇ ಬಾರಿಗೆ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಸಜ್ಜಾಗಿದೆ. ಈ ವಿಶಿಷ್ಟ ಘಟನೆಯು ಆಗಸ್ಟ್ 18 ರಂದು ನಡೆಯಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸುತ್ತದೆ.ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.
ಶೂನ್ಯ ನೆರಳು ದಿನವು +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುವ ಖಗೋಳ ವಿದ್ಯಮಾನವಾಗಿದೆ. ಅಂದರೆ ನಿಖರವಾಗಿ 12:24 ಕ್ಕೆ, ಸೂರ್ಯನನ್ನು ನೇರವಾಗಿ ತಲೆಯ ಮೇಲೆ ಬರುತ್ತಾನೆ. ಈ ಸಮಯದಲ್ಲಿ ಯಾವುದೇ ಸ್ಥಾಯಿ ವಸ್ತು, ಒಬ್ಬ ವ್ಯಕ್ತಿ ಅಥವಾ ಯಾವುದೇ ವಸ್ತುವಿನ ನೆರಳು ನೆಲದ ಮೇಲೆ ಬೀಳುವುದಿಲ್ಲ.
ಈ ಬಾರಿ ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಈ ವಿದ್ಯಮಾನಕ್ಕೆ ಬೆಂಗಳೂರಿನ ಜನರು ಸಾಕ್ಷಿಯಾಗಿದ್ದರು. ಈ ವರ್ಷದ ಎರಡನೇ ಬಾರಿಯ ಈ ವಿದ್ಯಮಾನ ಆಗಸ್ಟ್ 18ರಂದು ಸಂಭವಿಸಲಿದೆ. ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ವ್ಯತ್ಯಾಸದಲ್ಲಿ ಈ ಬೆಳವಣಿಗೆ ನಡೆಯುತ್ತದೆ. ದಕ್ಷಿಣಾಯನ ಹಾಗೂ ಉತ್ತರಾಯಣದಲ್ಲಿ ತಲಾ 1 ಬಾರಿ ಶೂನ್ಯ ನೆರಳಿನ ದಿನ ಬರುತ್ತದೆ ಎಂದು ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಹೇಳುತ್ತದೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.