Advertisement
ಸುದ್ದಿಗಳು

#ZeroShadowDay | ಆ.18 ರಂದು ಶೂನ್ಯ ನೆರಳು ದಿನ | ಖಗೋಳದ ಅಪರೂಪದ ವಿದ್ಯಮಾನ |

Share

ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಆ.18 ರಂದು ಈ ಅಪರೂಪದ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ. ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಈ ವಿದ್ಯಮಾನ ನಡೆದಿತ್ತು. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ.

Advertisement

ಬೆಂಗಳೂರು ನಗರವು 2023 ರಲ್ಲಿ ಎರಡನೇ ಬಾರಿಗೆ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಸಜ್ಜಾಗಿದೆ. ಈ ವಿಶಿಷ್ಟ ಘಟನೆಯು ಆಗಸ್ಟ್ 18 ರಂದು ನಡೆಯಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸುತ್ತದೆ.ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

ಶೂನ್ಯ ನೆರಳು ದಿನವು +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುವ ಖಗೋಳ ವಿದ್ಯಮಾನವಾಗಿದೆ. ಅಂದರೆ ನಿಖರವಾಗಿ 12:24  ಕ್ಕೆ, ಸೂರ್ಯನನ್ನು ನೇರವಾಗಿ ತಲೆಯ ಮೇಲೆ ಬರುತ್ತಾನೆ. ಈ ಸಮಯದಲ್ಲಿ ಯಾವುದೇ ಸ್ಥಾಯಿ ವಸ್ತು, ಒಬ್ಬ ವ್ಯಕ್ತಿ ಅಥವಾ ಯಾವುದೇ ವಸ್ತುವಿನ ನೆರಳು ನೆಲದ ಮೇಲೆ ಬೀಳುವುದಿಲ್ಲ.

ಈ ಬಾರಿ ಈಗಾಗಲೇ ಏಪ್ರಿಲ್‌ ತಿಂಗಳಲ್ಲಿ ಈ ವಿದ್ಯಮಾನಕ್ಕೆ ಬೆಂಗಳೂರಿನ ಜನರು ಸಾಕ್ಷಿಯಾಗಿದ್ದರು. ಈ ವರ್ಷದ ಎರಡನೇ ಬಾರಿಯ ಈ ವಿದ್ಯಮಾನ ಆಗಸ್ಟ್‌ 18ರಂದು ಸಂಭವಿಸಲಿದೆ. ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ವ್ಯತ್ಯಾಸದಲ್ಲಿ ಈ ಬೆಳವಣಿಗೆ ನಡೆಯುತ್ತದೆ. ದಕ್ಷಿಣಾಯನ ಹಾಗೂ ಉತ್ತರಾಯಣದಲ್ಲಿ ತಲಾ 1 ಬಾರಿ ಶೂನ್ಯ ನೆರಳಿನ ದಿನ ಬರುತ್ತದೆ  ಎಂದು ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಹೇಳುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

4 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

15 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

15 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 days ago