Advertisement
ಸುದ್ದಿಗಳು

#ZeroShadowDay | ಆ.18 ರಂದು ಶೂನ್ಯ ನೆರಳು ದಿನ | ಖಗೋಳದ ಅಪರೂಪದ ವಿದ್ಯಮಾನ |

Share

ಖಗೋಳದ ಅಪರೂಪ ವಿದ್ಯಮಾನ ಶೂನ್ಯ ನೆರಳು ದಿನ. ಆ.18 ರಂದು ಈ ಅಪರೂಪದ ವಿದ್ಯಮಾನವನ್ನು ವೀಕ್ಷಿಸಬಹುದಾಗಿದೆ. ಈ ವಿಶೇಷ ವಿದ್ಯಮಾನ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ.ಬೆಂಗಳೂರಿನಲ್ಲಿ ಏಪ್ರಿಲ್ 25 ರಂದು ಈ ವಿದ್ಯಮಾನ ನಡೆದಿತ್ತು. ಈ ವರ್ಷ ಎರಡನೇ ಬಾರಿಗೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ವೀಕ್ಷಣೆಗೆ ಸಿದ್ಧತೆ ನಡೆದಿದೆ.

ಬೆಂಗಳೂರು ನಗರವು 2023 ರಲ್ಲಿ ಎರಡನೇ ಬಾರಿಗೆ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಸಜ್ಜಾಗಿದೆ. ಈ ವಿಶಿಷ್ಟ ಘಟನೆಯು ಆಗಸ್ಟ್ 18 ರಂದು ನಡೆಯಲಿದೆ. ಸಾಮಾನ್ಯವಾಗಿ ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ಪ್ರದೇಶಗಳ ನಡುವೆ ಸಂಭವಿಸುತ್ತದೆ.ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

ಶೂನ್ಯ ನೆರಳು ದಿನವು +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುವ ಖಗೋಳ ವಿದ್ಯಮಾನವಾಗಿದೆ. ಅಂದರೆ ನಿಖರವಾಗಿ 12:24  ಕ್ಕೆ, ಸೂರ್ಯನನ್ನು ನೇರವಾಗಿ ತಲೆಯ ಮೇಲೆ ಬರುತ್ತಾನೆ. ಈ ಸಮಯದಲ್ಲಿ ಯಾವುದೇ ಸ್ಥಾಯಿ ವಸ್ತು, ಒಬ್ಬ ವ್ಯಕ್ತಿ ಅಥವಾ ಯಾವುದೇ ವಸ್ತುವಿನ ನೆರಳು ನೆಲದ ಮೇಲೆ ಬೀಳುವುದಿಲ್ಲ.

ಈ ಬಾರಿ ಈಗಾಗಲೇ ಏಪ್ರಿಲ್‌ ತಿಂಗಳಲ್ಲಿ ಈ ವಿದ್ಯಮಾನಕ್ಕೆ ಬೆಂಗಳೂರಿನ ಜನರು ಸಾಕ್ಷಿಯಾಗಿದ್ದರು. ಈ ವರ್ಷದ ಎರಡನೇ ಬಾರಿಯ ಈ ವಿದ್ಯಮಾನ ಆಗಸ್ಟ್‌ 18ರಂದು ಸಂಭವಿಸಲಿದೆ. ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ ಇರುವ ವ್ಯತ್ಯಾಸದಲ್ಲಿ ಈ ಬೆಳವಣಿಗೆ ನಡೆಯುತ್ತದೆ. ದಕ್ಷಿಣಾಯನ ಹಾಗೂ ಉತ್ತರಾಯಣದಲ್ಲಿ ತಲಾ 1 ಬಾರಿ ಶೂನ್ಯ ನೆರಳಿನ ದಿನ ಬರುತ್ತದೆ  ಎಂದು ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ಹೇಳುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 minutes ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

1 hour ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago