MIRROR FOCUS

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ ವೃತ್ತದೆಡೆಗೆ, ಚಲಿಸುತ್ತಿರುವ ಸೂರ್ಯ ತಾನು ಹಾದುಹೋಗುವ ಸ್ಥಳಗಳಲ್ಲಿ ಮಧ್ಯಾಹ್ನ ನೆತ್ತಿಯ ಮೇಲೆ ಬಂದಾಗ ಭೂಮಿಯ ಮೇಲೆ ಬೀಳುವ ವಸ್ತುಗಳ ನೆರಳು ಶೂನ್ಯವಾಗುತ್ತದೆ. ಆ ದಿನಗಳನ್ನು ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ. ಭೂಮಿಯ ಭ್ರಮಣದ ಅಕ್ಷವು 23.5 ಡಿಗ್ರಿ ವಾಲಿರುವುದರಿಂದ ಕರ್ಕಾಟಕ ಮತ್ತು ಮಕರ ಸಂಕ್ರಾತಿ ವೃತ್ತಗಳ ಒಳಭಾಗದಲ್ಲಿ ಈ ವಿದ್ಯಮಾನವು ವಿವಿಧ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.

Advertisement

ಹೆಚ್ಚಿನ Updates ಪಡೆಯಲು ರೂರಲ್‌ ಮಿರರ್.ಕಾಂ WhatsApp ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಇದಕ್ಕೆ ಸಂಬಂಧಿಸಿದ ವಿದ್ಯಮಾನವನ್ನು ಯಾರು ಬೇಕಾದರೂ ಮಾಡಿ ನೋಡಬಹುದು. ಮಂಗಳೂರಿನಲ್ಲಿ ಇದಕ್ಕೆ ಸಂಬಂಧಿಸಿದ ವಿವರಗಳನ್ನು ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಾರ್ವಜನಿಕರಿಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ದೇಶದ ಇತರ ಕೇಂದ್ರಗಳ ಸಮನ್ವಯತೆ ಹಾಗೂ ಸಮಾಲೋಚನೆಯಿಂದ ಕೆಲವು ಪ್ರಯೋಗಗಳನ್ನು ಸಹ ಈ ವಿದ್ಯಮಾನಕ್ಕೆ ಸಂಬಂಧಿಸಿದಂತೆ ನಡೆಸಲಾಗುತ್ತಿದೆ. ಪ್ರಾತ್ಯಕ್ಷಿಕೆಗಳನ್ನು ಹಾಗೂ ಪ್ರಯೋಗಗಳನ್ನು ಕೇಂದ್ರದ ಆವರಣದಲ್ಲಿ  ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಆಯೋಜಿಸಿದ್ದು ಆಸಕ್ತರು ಭಾಗವಹಿಸಬೇಕಾಗಿ  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

11 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

14 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

14 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

16 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

2 days ago