Advertisement
ಪ್ರಮುಖ

ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ

Share

ಮಾರುಕಟ್ಟೆಯಲ್ಲಿ ಗುಣಮಟ್ಟ ಕಡಿಮೆ ಅಥವಾ ಆಕಾರ-ಬಣ್ಣದ ಕಾರಣದಿಂದ ತಿರಸ್ಕೃತವಾಗುವ ಮಾವು ಮತ್ತು ತೆಂಗುಗಳು ಸಾಮಾನ್ಯವಾಗಿ ರೈತರಿಗೆ ನಷ್ಟದ ಕಾರಣವಾಗುತ್ತವೆ. ಆದರೆ ಇದೇ ‘ಗ್ರೇಡ್-ಬಿ’ ಉತ್ಪನ್ನಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ಹೊಸ ಆದಾಯದ ಮೂಲವನ್ನಾಗಿ ಮಾಡುವ ‘ಜೀರೋ ವೇಸ್ಟ್’ (Zero Waste) ಮಾದರಿ ಇದೀಗ ಗಮನ ಸೆಳೆಯುತ್ತಿದೆ.

ಮಹಾರಾಷ್ಟ್ರ, ಕರ್ನಾಟಕ ಹಾಗೂ ತಮಿಳುನಾಡಿನ ಸುಮಾರು 350 ರೈತರೊಂದಿಗೆ ಕಾರ್ಯನಿರ್ವಹಿಸುತ್ತಿರುವ  ಐವಿನಿ ಎಂಬ ಸಂಸ್ಥೆಯೊಂದು ಗ್ರೇಡ್-ಬಿ ಮಾವುಗಳನ್ನು ಪಲ್ಪ್, ಪಾನೀಯಗಳು ಹಾಗೂ ಇತರೆ ಸಂಸ್ಕರಿತ ಉತ್ಪನ್ನಗಳಾಗಿ ಪರಿವರ್ತಿಸುತ್ತಿದೆ. ಅದೇ ರೀತಿ ತೆಂಗಿನಿಂದ ತೆಂಗಿನ ಹಾಲು, ತೆಂಗಿನ ಎಣ್ಣೆ ಉತ್ಪಾದಿಸಲಾಗುತ್ತಿದೆ. ಉಳಿದ ಉಪ ಉತ್ಪನ್ನಗಳಾದ ಸಿಪ್ಪೆ, ನಾರು ಹಾಗೂ ಚಿಪ್ಪುಗಳನ್ನು ಕೊಯರ್, ಚಾರ್ಕೋಲ್ ಮತ್ತು ಇತರೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಬಳಸಲಾಗುತ್ತಿದೆ.

ಐವಿನಿ ಸಂಸ್ಥೆಯ ಮಾಹಿತಿಯ ಪ್ರಕಾರ, ಸಂಗ್ರಹವಾಗುವ ಮಾವುಗಳಲ್ಲಿ ಸುಮಾರು 10-15% ಮತ್ತು ತೆಂಗುಗಳಲ್ಲಿ ಸುಮಾರು 30% ಉತ್ಪನ್ನಗಳು ಗ್ರೇಡ್-ಬಿ ಅಥವಾ ಹೆಚ್ಚುವರಿ ಉತ್ಪನ್ನಗಳಾಗಿರುತ್ತವೆ. ಇವುಗಳನ್ನು ತ್ಯಾಜ್ಯವಾಗಿ ಬಿಡದೇ ಸಂಸ್ಕರಿಸುವುದರಿಂದ ರೈತರಿಗೆ ಹೆಚ್ಚುವರಿ ಆದಾಯ ದೊರೆಯುವುದರ ಜೊತೆಗೆ ಆಹಾರ ತ್ಯಾಜ್ಯವೂ ಕಡಿಮೆಯಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಮಾದರಿಯಲ್ಲಿ ತಯಾರಾಗುವ ಮಾವು ಹಾಗೂ ತೆಂಗು ಆಧಾರಿತ ಉತ್ಪನ್ನಗಳಿಗೆ ಯುರೋಪ್ ಮತ್ತು ಯುಕೆಯ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಅಮೆರಿಕ ಸೇರಿದಂತೆ ಇತರ ಉನ್ನತ ಮೌಲ್ಯದ ರಫ್ತು ಮಾರುಕಟ್ಟೆಗಳತ್ತ ವಿಸ್ತರಿಸುವ ಯೋಜನೆಯೂ ಇದೆ.

ರೈತರಿಗೆ ಪಾಠ ಏನು? :  ಮಾವು, ತೆಂಗು, ಹಲಸು, ಬಾಳೆ ಸೇರಿದಂತೆ ತೋಟಗಾರಿಕಾ ಬೆಳೆಗಳಲ್ಲಿ ಮಾರುಕಟ್ಟೆಗೆ ಅಯೋಗ್ಯವೆಂದು ತಿರಸ್ಕೃತವಾಗುವ ಉತ್ಪನ್ನಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿದರೆ ರೈತರಿಗೆ ಹೆಚ್ಚುವರಿ ಆದಾಯ ಸಿಗಬಹುದು. ಕೃಷಿ ತ್ಯಾಜ್ಯವನ್ನೇ ಸಂಪತ್ತಾಗಿ ಪರಿವರ್ತಿಸುವ ಕೃಷಿ ಮಾದರಿಗಳು ಭವಿಷ್ಯದ ಕೃಷಿ ಉದ್ಯಮದ ಪ್ರಮುಖ ದಿಕ್ಕಾಗಬಹುದು.

A zero-waste business model is creating value from Grade-B mangoes and coconuts that are usually rejected due to cosmetic imperfections. By converting them into pulp, beverages, coconut milk, oil, coir, charcoal and other value-added products, farmers gain additional income while reducing food waste. The model is attracting growing demand in export markets such as Europe and the UK.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…

55 minutes ago

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

9 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

10 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

11 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

11 hours ago