Advertisement
ಸುದ್ದಿಗಳು

ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

Share

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

1 hour ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

1 hour ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

14 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

20 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago