ಸುದ್ದಿಗಳು

ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

3 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

3 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

4 hours ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

4 hours ago

ಗುರು-ಬುಧನಿಂದ ಈ 5 ರಾಶಿಗೆ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago