ಸುದ್ದಿಗಳು

ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

Share

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

3 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

3 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

3 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

19 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

19 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

20 hours ago