ಸುದ್ದಿಗಳು

ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement
Advertisement

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

4 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

5 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

14 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

15 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

15 hours ago