Advertisement
ಸುದ್ದಿಗಳು

ಜಿಪಂ-ತಾಪಂ ಚುನಾವಣೆ | ಕ್ಷೇತ್ರ ವಿಂಗಡಣೆಯ ಪರಿಷ್ಕೃತ ಮಾರ್ಗಸೂಚಿಗೆ ಮನವಿ | ಶೀಘ್ರದಲ್ಲೇ ಚುನಾವಣೆ |

Share

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆಯು ಶೀಘ್ರದಲ್ಲೇ ನಡೆಯಲಿದೆ. ಮಾ.31 ರ ಮೊದಲು ಕ್ಷೇತ್ರಗಳ ವೈಜ್ಞಾನಿಕವಾಗಿ ಮರುವಿಂಗಡಣೆಗೆ ಸಭೆ ನಡೆಸಲಾಗುವುದು, ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಕಾರ್ಕಳ ಶಾಸಕ ಸುನೀಲ್‌ಕುಮಾರ್ ಈ  ವಿಷಯ ಪ್ರಸ್ತಾಪಿಸಿ, ಮುಂದೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ. ಆದರೆ ಇಲ್ಲಿ ರಾಜ್ಯ ಚುನಾವಣಾ ಆಯೋಗ ಮಾಡಿರುವ  ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಹಲವಾರು ವ್ಯತ್ಯಾಸಗಳಿವೆ, ಇದರಿಂದ ಅನ್ಯಾಯವಾಗುತ್ತದೆ ಎಂದು  ಸುನಿಲ್ ಕುಮಾರ್ ಸರಕಾರದ ಗಮನ ಸೆಳೆದರು.ಇದಕ್ಕೆ ಹಲವು ಶಾಸಕರು ದ್ವನಿಗೂಡಿಸಿದರು,  ಈಗಿನ ನಿಯಮಗಳ ಪ್ರಕಾರದ ಮಾರ್ಗಸೂಚಿಗಳು ಸರಿಯಿಲ್ಲ. ಇದರಿಂದ ಹಲವೆಡೆ ಜಿ.ಪಂ. ಕ್ಷೇತ್ರಗಳು ಹೆಚ್ಚಾಗುತ್ತವೆ. ತಾಲೂಕು ಪಂಚಾಯತ್ ಕ್ಷೇತ್ರಗಳು ಕಡಿಮೆಯಾಗುತ್ತವೆ. ಗೊಂದಲಗಳು ಹೆಚ್ಚಾಗುತ್ತವೆ. ಹಾಗಾಗಿ  ಮಾರ್ಗಸೂಚಿಗಳ ಪರಿಷ್ಕರಣೆ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾ.31 ರ ಮೊದಲು ಸಭೆ ನಡೆಸಿ ಬಳಿಕ ಚುನಾವಣಾ ಆಯೋಗಕ್ಕೆ ಕ್ಷೇತ್ರ ವಿಂಗಡಣೆಯನ್ನು ವೈಜ್ಞಾನಿಕವಾಗಿ ನಡೆಸಿ ಪರಿಷ್ಕರಣೆ ಮಾಡಲು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಜಿಪಂ ತಾಪಂ ಚುನಾವಣೆ ಮುಂದೂಡುವುದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಅವರು, ಅವೈಜ್ಞಾನಿಕ ಮಾರ್ಗಸೂಚಿಗಳ ಆಧಾರದ ಮೇಲೆ ವಿಂಗಡಣೆ  ಮಾಡುವುದರಿಂದ ಭವಿಷ್ಯದಲ್ಲಿ ಆಡಳಿತ ಮತ್ತು ಆಡಳಿತದ ಯಂತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯುವಂತೆ ಸರಕಾರಕ್ಕೆ ಸೂಚಿಸಿದರು. ಆದರೆ, ಸ್ಥಾನಗಳ ಮೀಸಲಾತಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago