ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

October 5, 2019
1:57 PM

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror