ಅ.31ರಂದು ಸಹಕಾರ ಸಂಘಗಳ ನಿರ್ದೇಶಕರಿಗೆ ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

October 29, 2019
1:53 PM

ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳಿ ಬೆಂಗಳೂರು ಹಾಗು ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಹಾಗು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಅ.31ರಂದು ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ, ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕರಾದ ಪಿ.ಕೆ.ಜಯಕೃಷ್ಣೇ ಗೌಡ, ಚಿತ್ತರಂಜನ್ ಬೋಳಾರ್, ಅಕಾಡಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ, ಇ-ಸ್ಟಾಂಪಿಂಗ್, ಸಹಕಾರ ಸಂಘದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗು ಸಹಕಾರ ಸಂಘಗಳ ಚುನಾವಣಾ ನಿಯಮ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಸಿ.ನಾರಾಣ ಗೌಡ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ವೆಂಕಟರಮಣ ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror