ಅಂಕತ್ತಡ್ಕ-ಮಂಜುನಾಥನಗರ ರಸ್ತೆ ಅಭಿವೃದ್ದಿಗೆ ಚಾಲನೆ

November 10, 2019
2:09 PM

ಸವಣೂರು: ಬೆಳಂದೂರು ಜಿ.ಪಂ.ವ್ಯಾಪ್ತಿಯ ಸವಣೂರು ಗ್ರಾ.ಪಂ.ಕ್ಕೊಳಪಟ್ಟ ಅಂಕತ್ತಡ್ಕ-ಬಂಬಿಲ-ಮಂಜುನಾಥನಗರ ಸಂಪರ್ಕ ರಸ್ತೆ ಅಭಿವೃದ್ದಿ ಕೆಲಸ ನ.9ರಂದು ಆರಂಭಗೊಂಡಿತು.ಈ ಮೂಲಕ ಈ ಭಾಗದ ಬಹುವರ್ಷಗಳ ಬೇಡಿಕೆಯೊಂದು ಈಡೇರುವ ಹಂತಕ್ಕೆ ಬಂದಿದೆ.

ಲೋಕೋಪಯೋಗಿ ಇಲಾಖೆಯ 5-50 ಅಪೆಂಡಿಕ್ಸ್-ಇ ಯೋಜನೆಯ ಮೂಲಕ 2 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಆರಂಭವಾಗಿದೆ. ಮಳೆಗಾಲದಲ್ಲಿ ಈ ರಸ್ತೆಯೂ ಸಂಪೂರ್ಣವಾಗಿ ಹದೆಗೆಟ್ಟು ಸಂಚರಿಸುವುದೇ ಕಷ್ಟಕರವಾದ ಪರಿಸ್ಥಿತಿ ಇಲ್ಲಿತ್ತು.ಪ್ರತೀ ಬಾರಿಯೂ ಮಳೆಗಾಲದಲ್ಲಿ ಊರಿನ ಪ್ರಮುಖರು ಸೇರಿಕೊಂಡು ತಮ್ಮ ಸ್ವಂತ ಖರ್ಚಿನಲ್ಲಿ ಕೆಂಪು ಕಲ್ಲು, ದಪ್ಪ ಮರಳು ತಂದು ಹೊಂಡಮುಚ್ಚಿಸಿ, ರಸ್ತೆ ದುರಸ್ಥಿಪಡಿಸುವ ಮೂಲಕ ಸಾರ್ವಜನಿಕರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದರು.ಮುಂದಕ್ಕೆ ಈ ಸಮಸ್ಯೆ ತಪ್ಪಲಿದೆ.
ಹಿರಿಯರಾದ ಭಾರತಿ ಗ್ರಾಮ ವಿಕಾಸ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಬಂಬಿಲ ಚಾಲನೆ ನೀಡಿದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಮಾಜಿ ಸದಸ್ಯ ಸುಧೀರ್ ಕುಮಾರ್ ರೈ ಕುಂಜಾಡಿ,ಚೈತನ್ಯ ರೈತ ಶಕ್ತಿಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಗೌರವ ಸಲಹೆಗಾರ ಸುಧಾಕರ ರೈ ಕುಂಜಾಡಿ,ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ,ನವೀನ್ ಕುಮಾರ್ ರೈ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ರೈ  ಬೈಲಾಡಿ,ಸದಸ್ಯರಾದ ಜಯಪ್ರಕಾಶ್,ಪ್ರಶಾಂತ್ ಕುಂಜಾಡಿ,ರುಕ್ಮಯ್ಯ,ಮಂಜುನಾಥನಗರ ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ವಿಮಲಾ,ಸವಿತಾ ಹರೀಶ್ ರೈ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror