ಅಂಗಾರ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗಳಿಗೆ ಮನವಿ

August 22, 2019
11:30 AM

ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror