ಅಂತರ್ಜಲ ಜನಜಾಗೃತಿ ಶಿಬಿರ: ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ

March 3, 2020
6:31 PM

ಧರ್ಮಸ್ಥಳ: ಶುದ್ಧವಾದ ಗಾಳಿ ಮತ್ತು ನೀರು ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.

Advertisement

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ.ಜಿಲ್ಲಾಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗುಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು. ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಅವರು ಹೇಳಿದರು.

ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ.ಅಧ್ಯಕ್ಷ ಕೇಶವ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ,ಜೋಸೆಫ್‍ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಉಮೇಶ್ ಕೆ. ಸ್ವಾಗತಿಸಿದರು. ಪ್ರಫುಲ್ಲಾ ಧನ್ಯವಾದವಿತ್ತರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group