“ಅಂಫಾನ್” ಚಂಡಮಾರುತ | ಕರಾವಳಿ ಜಿಲ್ಲೆಯಲ್ಲಿ ಮಳೆ ಸೂಚನೆ | 3 ದಿನಗಳ ಕಾಲ YELLOW Alert…! |

May 15, 2020
2:15 PM

ಹವಾಮಾನ ಹೈಲೈಟ್ಸ್ :

# ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಪ್ರಭಾವ ಹೆಚ್ಚಿಸಿದ ಅಂಫಾನ್ ಚಂಡಮಾರುತ

# ಮೇ 15  ರಿಂದ 3 ದಿನಗಳ ಕಾಲ ಮಳೆ ಸಾಧ್ಯತೆ ,  ಅಂಡಮಾನ್, ಒಡಿಶಾ, ಬಂಗಾಳದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ

# ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ,  ಬಿರುಗಾಳಿ ಎಚ್ಚರಿಕೆ ನೀಡಲಾಗಿದೆ


ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಲಕ್ಷಣಗಳು ಹೆಚ್ಚಾಗಿದೆ. ಕಳೆದ 3 ದಿನಗಳಿಂದ ವಾಯುಭಾರ ಕುಸಿತದ ಕಾರಣದಿಂದ ಸಮುದ್ರದಲ್ಲಿ  ಮೇಲ್ಮೈ ಸುಳಿಗಾಳಿ ಕಂಡುಬಂದಿತ್ತು. ಇದೀಗ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ “ಅಂಫಾನ್” ಚಂಡಮಾರುತವು ಕರಾವಳಿ ಪ್ರದೇಶಗಳಲ್ಲೂ  ಪ್ರಭಾವ ಬೀರಲಿದೆ.

ಈಗಿನ ಅಂದಾಜು ಪ್ರಕಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಭಾರೀ ಮಳೆ ಬೀಳಲಿದ್ದು ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.  ಈ ಕಾರಣಕ್ಕಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ “ಯಲ್ಲೋ ಅಲರ್ಟ್” ಘೋಷಿಸಿದೆಯಲ್ಲದೆ 8 ರಾಜ್ಯಗಳು ಮತ್ತು ಕೇಂದ್ರ ಪ್ರಾಂತ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಎಚ್ಚರಿಕೆ ರವಾನಿಸಿದೆ.

ಮೇ 15  ರಿಂದ ದಕ್ಷಿಣ ಮತ್ತು ಮಧ್ಯ ಬಂಗಾಳಕೊಲ್ಲಿಗೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 3 ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಗಾಳಿ ಸಹಿತ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಂಫಾನ್ ಚಂಡಮಾರುತವು ತನ್ನ ಪ್ರಭಾವ ಹೆಚ್ಚಿಸಿದರೆ  ಈ ಬಾರಿಯ ಮುಂಗಾರು  ಮಳೆಯ ಮೇಲೆ ಪರಿಣಾಮ ಬೀರಲಿದೆ.

ಇಂದು ಮತ್ತು ನಾಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ, ಮಂಗಳವಾರ ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror