ಅಂಬಿಕಾದಲ್ಲಿ ಸಿ.ಎ. ಕೋಚಿಂಗ್ ಉದ್ಘಾಟನೆ

June 24, 2019
4:44 PM

ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.

Advertisement
Advertisement

ಅವರು  ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು.  ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ  ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್‍ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror