ಅಕ್ಕಿ ಗಿರಣಿ ಸೆಸ್ ದರ ಇಳಿಕೆ ಪರಿಶೀಲನೆ: ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ

December 20, 2019
7:50 PM

ಬೆಂಗಳೂರು: ಅಕ್ಕಿ ಗಿರಣಿಗಳಿಗೆ ವಿಧಿಸಲಾಗುವ ಸೆಸ್ ದರವನ್ನು ಶೇ. 1.5 ರಿಂದ ಶೇ. 1ಕ್ಕೆ ಇಳಿಸುವಂತೆ ಅಕ್ಕಿ ಗಿರಣಿಗಳ ಮಾಲೀಕರು ಮಾಡಿರುವ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದರು.

Advertisement
Advertisement

ಶಾಸಕ ಹಾಗೂ ಅಕ್ಕಿ ಗಿರಣಿಗಳ ಮಾಲೀಕರ ಸಂಘದ ಅಧ್ಯಕ್ಷ ಪರಣ್ಣ ಮುನವಳ್ಳಿ ನೇತೃತ್ವದ ನಿಯೋಗವು ಡಿ.20ರಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ನೆರೆಯ ರಾಜ್ಯಗಳಲ್ಲಿ ಅಕ್ಕಿ ಗಿರಣಿಗಳ ಮೇಲಿನ ಸೆಸ್ ಶೇ. 1 ರಷ್ಟಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ಶೇ. 1.5 ರಷ್ಟಿದೆ. ಈಗಾಗಲೇ ಕಳೆದ ವರ್ಷ ಮಳೆ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಗಿರಣಿಗಳು ನಷ್ಟದಲ್ಲಿದ್ದು, ಸೆಸ್ ದರವನ್ನು ಶೇ. 1 ಕ್ಕೆ ಇಳಿಸುವಂತೆ ಮನವಿ ಮಾಡಿತು. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದೀಗ ಸಿದ್ಧವಾಗುತ್ತಿರುವ ನೂತನ ಕೈಗಾರಿಕಾ ನೀತಿಯಲ್ಲಿ ಅಕ್ಕಿ ಗಿರಣಿಗಳ ಆಧುನೀಕರಣಕ್ಕೆ ನೆರವು ನೀಡುವ ಕಾರ್ಯಕ್ರಮ ರೂಪಿಸುವಾಗ ದೊಡ್ಡ ಹಾಗೂ ಸಣ್ಣ ಅಕ್ಕಿ ಗಿರಣಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಸಮ್ಮತಿ ನೀಡಿದರು. ಸ್ಥಳೀಯ ಸಂಸ್ಥೆಗಳು ಅಕ್ಕಿ ಗಿರಣಿಗಳಿಗೆ ವಾಣಿಜ್ಯ ದರದಲ್ಲಿ ತೆರಿಗೆ ವಿಧಿಸುತ್ತಿದ್ದು, ಆಸ್ತಿಗಿಂತ ಆಸ್ತಿ ತೆರಿಗೆಯೇ ಹೊರೆಯಾಗಿದೆ. ಅಕ್ಕಿ ಗಿರಣಿಗಳನ್ನು ಕೃಷಿ ಆಧಾರಿತ ಕೈಗಾರಿಕೆಯೆಂದು ಪರಿಗಣಿಸಿ, ಆಸ್ತಿ ತೆರಿಗೆಯನ್ನು ಕೈಗಾರಿಕಾ ದರದಲ್ಲಿ ವಿಧಿಸಬೇಕು ಎಂದು ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group