ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಘಟಿತರಾಗೋಣ- ದಯಾನಂದ ಕತ್ತಲ್ ಸಾರ್

February 8, 2020
2:42 PM
ಮಂಗಳೂರು: ಭಾರತವು ಜಗತ್ತಿಗೆ ದೇವರಕೋಣೆ.ದೇವರು ಮತ್ತು ದೈವಗಳ‌ ಪೂಜಿಸುವ ಶ್ರೇಷ್ಠವಾದ ಭಾರತೀಯ ಸಂಸ್ಕೃತಿ.ಇಡೀ ಮಾನವ ಕುಲವನ್ನು  ಸಾತ್ತ್ವಿಕಗೊಳಿಸಲು ಮತ್ತು ಜೀವನದ ಉಧ್ದಾರವಾಗಲು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗುವ ಪ್ರತಿಯೊಂದು ಸಿಧ್ಧಾಂತವನ್ನು ಜೀವನದಲ್ಲಿ ಅಳವಡಿಸಿದರೆ ವ್ಯಕ್ತಿಯ ಜೊತೆಗೆ ಸಮಾಜ, ಮತ್ತು ಇಡೀ ವಿಶ್ವವೇ ಸಾತ್ತ್ವಿಕ ಮತ್ತು ಸುಖೀಯಾಗುವುದು‌. ಹೀಗಾಗಿ ಅಖಂಡ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ ಮಾಡಿ ಸಂಘಟಿತರಾಗೋಣ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು.
ಅವರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ 2 ದಿನಗಳ ಕಾಲ ಮಂಗಳೂರಿನ ವೆಂಕಟರಮಣ ದೇವಸ್ಥಾನದ ಸಭಾಗೃಹದಲ್ಲಿ  ನಡೆಯುವ ದಕ್ಷಿಣ ಜಿಲ್ಲಾ ಹಿಂದೂ ಅಧಿವೇಶನ ಶನಿವಾರ ಉದ್ಘಾಟಿಸಿ ಮಾತನಾಡಿದರು. ಮಾತೃಭೂಮಿ, ಜನ್ಮನೀಡಿದ ಮಾತೆಗೆ ಗೌರವ ನೀಡಲು ಕಲಿಸುವುದು, ಗೋಮಾತೆಯನ್ನು ಪೂಜನೀಯ ಸ್ಥಾನದಲ್ಲಿ ಕಾಣಲು ಕೇವಲ ಸನಾತನ ಹಿಂದೂ ಧರ್ಮದಲ್ಲಿ ಮಾತ್ರ ಸಾಧ್ಯ ಎಂದರು.
ಹಿಂದೂ ಜನಜಾಗೃತಿ ಸಮಿತಿ ರಾಜ್ಯ  ಸಮನ್ವಯಕ ಗುರುಪ್ರಸಾದ್ ಗೌಡ ಮಾತನಾಡಿ, ಹಿಂದೂ ಅಧಿವೇಶನದ ಉದ್ದೇಶವು ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುವುದಾಗಿದೆ. ಹಿಂದೂ ರಾಷ್ಟ್ರದ ಬೇಡಿಕೆಯು ಕಾನೂನು ಬಾಹಿರವಲ್ಲ. ಕಾನೂನು ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಬೇಡಿಕೆಯನ್ನು ಮಾಡುವುದಾಗಿದೆ‌‌. ಜಗತ್ತಿನಲ್ಲಿ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ.ಹಿಂದೂ ರಾಷ್ಟ್ರ ದ ವಿಚಾರ ಭಾರತ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ‌. ಸೆಕ್ಯುಲರ್ ವ್ಯವಸ್ಥೆಯಿಂದಾಗಿ ಹಿಂದೂ ಧರ್ಮದ ಮೇಲೆ ಅನ್ಯಾಯವಾಗುತ್ತಿದೆ‌ ಎಂದರು.
ನ್ಯಾಯವಾದಿ ಕೃಷ್ಣಮೂರ್ತಿ ಮಾತನಾಡಿ ಇಂದು ಭಾರತವನ್ನು ವಿಭಜಿಸಲಾಗುತ್ತದೆ‌.ಮತಾಂತರ, ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆಯಿಂದ ಹಿಂದೂ ಧರ್ಮದ ಮೇಲೆ ಆಘಾತವಾಗುತ್ತಿದೆ‌‌.ಮಾತ್ರವಲ್ಲದೆ ನಾಗರಿಕ ತಿದ್ದುಪಡಿ ಕಾನೂನು ವಿರೋಧಿಸಿ ದೇಶದ ಆಸ್ತಿಪಾಸ್ತಿಗಳನ್ನು ಹಾನಿ ಮಾಡಲಾಗುತ್ತಿದೆ.ಅಖಂಡ ವಿಶ್ವಕ್ಕೆ ಶಾಂತಿಯನ್ನು ನೀಡಿದ ಧರ್ಮ ಅಂದರೆ ಸನಾತನ ಹಿಂದೂ ಧರ್ಮವಿದೆ.ಮುಂದಿನ ಪೀಳಿಗೆಯನ್ನು ಸಾತ್ತ್ವಿಕ ಮಾಡಬೇಕಾದರೆ ಮಕ್ಕಳಿಗೆ ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಕಲಿಸಿ ದೇಶದ ಭವಿಷ್ಯವನ್ನು ಸುಧೃಢ ಮಾಡಬೇಕಾಗಿದೆ ಎಂದರು.
ಸನಾತನ ಸಂಸ್ಥೆಯ ಸಂತರಾದ ರಮಾನಂದ ಗೌಡ ಮಾತನಾಡಿ ಸ್ತುತ ದೇಶವು ಸಂಧಿಕಾಲದಲ್ಲಿ ಹಾದುಹೋಗುತ್ತಿದೆ. ಧರ್ಮ ಸಂಸ್ಥಾಪನೆಯ ಕಾಲವು ಸಮೀಪಿಸಿದೆ. ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ತನು,ಮನ, ಧನದ ತ್ಯಾಗದ ಜೊತೆಗೆ ಭಗವಂತನ ಆಶೀರ್ವಾದವು ಅಗತ್ಯವಿದೆ ಇದಕ್ಕಾಗಿ ಶ್ರಧ್ಧಾ ಭಕ್ತಿಯನ್ನು ಹೆಚ್ಚಿಸಬೇಕಾಗಿದೆ ಎಂದರು.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ
July 20, 2025
10:25 PM
by: The Rural Mirror ಸುದ್ದಿಜಾಲ
ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ
July 10, 2025
7:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group