ಅಜ್ಜಾವರದಿಂದ ತೊಡಿಕಾನಕ್ಕೆ ಪಾದಯಾತ್ರೆ

October 14, 2019
6:42 AM

ಸುಳ್ಯ: ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡು ಬ್ರಹ್ಮಕಲಶದ ಪೂರ್ವಭಾವಿಯಾಗಿ ಸೀಮೆ ದೇವರಾದ ತೊಡಿಕಾನ ಮಲ್ಲಿಕಾರ್ಜುನ ದೇವರ ಆಶೀರ್ವಾದ ಪಡೆಯಲು ಅಜ್ಜಾವರದಿಂದ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ತೊಡಿಕಾನ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ತೊಡಿಕಾನ ಕ್ಷೇತ್ರಕ್ಕೆ ಆಗಮಿಸಿದ ಸಾವಿರಾರು ಭಕ್ತರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ರೈ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತಿತರರು ಸೇರಿ ಸ್ವಾಗತಿಸಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಮಾವಿನಪಳ್ಳ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚನಿಯ ಕಲ್ತಡ್ಕ, ಬ್ರಹ್ಮಕಲಶ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಸುರೇಶ್ ಕಣೆಮರಡ್ಕ, ಕುಮಾರ್ ರೈ ಮೇನಾಲ, ಪ್ರಬೋದ್ ಶೆಟ್ಟಿ ಮೇನಾಲ, ಬಾಲಕೃಷ್ಣ ಪಿ. ಎಸ್ , ರಾಘವ ಅಜ್ಜಾವರ, ಶೀನಪ್ಪ ಬಯಂಬು ,ರಮೇಶ್ ಇರಂತಮಜಲು, ಸುಭೋದ್ ಶೆಟ್ಟಿ ಮೇನಾಲ, ಭಾಸ್ಕರ ರಾವ್ ಬಯಂಬು, ಮಹೇಶ್ ಮೇನಾಲ, ಲೋಕೇಶ್ ತೋಟಚಾವಡಿ, ರಾಜೇಶ್ ರೈ ಮೇನಾಲ , ಸಾವಿತ್ರಿ ಅಜ್ಜಾವರ, ಮತ್ತಿತರರು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಪಾದಯಾತ್ರೆಯಲ್ಲಿ ಭಜನೆ ನಡೆಯಿತು. ಪಾದಯಾತ್ರೆಗೆ ಸ್ಥಳೀಯರು ಅಲ್ಲಲ್ಲಿ ಸ್ವಾಗತ ನೀಡಿದರು. ಪಾನೀಯ ಮತ್ತು ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror