ಅಡಿಕೆ ಖರೀದಿಸಿದ ಕ್ಯಾಂಪ್ಕೋ | ಎಲ್ಲಾ ಶಾಖೆಗಳಲ್ಲೂ ನಿಗದಿತ ಸಮಯದಲ್ಲಿ ಅಡಿಕೆ ಖರೀದಿ| ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ |

April 13, 2020
7:53 PM

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ  ಅಡಿಕೆ ಖರೀದಿ ನಡೆಸಲಾಗಿದೆ.  25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250  ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.

Advertisement
Advertisement

ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ  ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.

ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು  ಹೇಳುತ್ತಾರೆ.

Advertisement

ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ  ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು.  ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.

 

Advertisement

 

 

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ
Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |
May 7, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror