ಅಡಿಕೆ ಧಾರಣೆ ಜಿಗಿತ | ಮಾರುಕಟ್ಟೆ ಮೇಲೆ ಹಿಡಿತ | ಅಡಿಕೆ ಬೆಳೆಗಾರರಿಗೆ ಖುಷಿಯ ಜೊತೆಗೆ ಆತಂಕ…!

June 18, 2020
10:37 AM

ಅಡಿಕೆ ಧಾರಣೆ ಏರುತ್ತಿದೆ. ಈ ಬಾರಿ ಕೊರೊನಾ ಕಾರಣದಿಂದ ಅಡಿಕೆ ಬೆಳೆಯ ನಿಜವಾದ ಸಮಸ್ಯೆ ಏನು ಎಂಬುದು ಸೂಕ್ಷ್ಮವಾಗಿ ಅರ್ಥ ಮಾಡಿದರೆ ತಿಳಿಯುತ್ತದೆ. ಪ್ರತೀ ಬಾರಿ ಗುಟ್ಕಾ ನಿಷೇಧ ಎಂದಾಗ ಅಡಿಕೆ ಬೆಳೆಗಾರರು ಭಯಗೊಳ್ಳುತ್ತಿದ್ದರು. ಈ ಬಾರಿ ಗುಟ್ಕಾ ನಿಷೇಧವಾದರೂ ಅಡಿಕೆಗೆ ಬೇಡಿಕೆ ಇದೆ. ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಎಲ್ಲೂ ದಾಸ್ತಾನು ಇಲ್ಲ. ಅಂದರೆ ಅಡಿಕೆ ಕಳ್ಳ ದಾರಿಯ ಮೂಲಕ ಭಾರತದೊಳಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜಕಾರಣಿಗಳು ಎಷ್ಟೇ ಹೇಳಿದರೂ , ಯಾರು ಎಷ್ಟೇ ವಿಶ್ಲೇಷಣೆ ಮಾಡಿದರೂ ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಆಗಲೇಬೇಕಿದೆ. ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧಕ್ಕಲ್ಲ, ಅಡಿಕೆ ಆಮದು ಬಗ್ಗೆ ಭಯ ಪಡಬೇಕಿದೆ. ಇದರ ತಡೆಗೆ ಸೂಕ್ತ ಕ್ರಮ ಅಗತ್ಯವಿದೆ.

Advertisement
Advertisement

ಪುತ್ತೂರು: ಅಡಿಕೆ ಮಾರುಕಟ್ಟೆ ಏರಿಕೆ ಕಂಡಿದೆ. 300 ರೂಪಾಯಿ ಕಳೆದು ಬುಧವಾರ ಮತ್ತೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 310 ಹಾಗೂ ಹಳೆ ಅಡಿಕೆ  325 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ.

ಖಾಸಗಿ ವಲಯದಲ್ಲೂ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 325 ಹಾಗೂ ಹಳೆ ಅಡಿಕೆ 340 ರೂಪಾಯಿಗೆ ಖರೀದಿ ನಡೆಸಿದೆ. ಹಾಗಿದ್ದರೂ ಅಡಿಕೆ ಮಾರುಕಟ್ಟೆ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ.ಬೇಡಿಕೆ ಏರುತ್ತಿದೆ. ಸಹಜವಾಗಿಯೇ ಧಾರಣೆ ಏರಿಕೆಯಾಗಿದೆ.

ಕೊರೊನಾ ಇಫೆಕ್ಟ್ ಇದು. ಕೊರೊನಾ ಕಾರಣದಿಂದ ಅಡಿಕೆ ಮಾರುಕಟ್ಟೆಗೆ ಬಿಡಲು ಕನಿಷ್ಟ ಎರಡು ತಿಂಗಳು ಬೆಳೆಗಾರರಿಗೆ ಸಾಧ್ಯವಾಗಿಲ್ಲ. ಇದೇ ಹೊತ್ತಿಗೆ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆಗಳೂ ಭಾರತದ ಒಳ ಬರಲು ಸಾಧ್ಯವಾಗಿಲ್ಲ. ಪ್ರತೀ ಬಾರಿಯೂ ಅಡಿಕೆ ಆಮದು ನಿಷೇಧ ಎಂದರೂ ಅಡಿಕೆ ಕಳ್ಳದಾರಿ ಮೂಲಕ ಬರುತ್ತಲೇ ಇತ್ತು. ಎಷ್ಟೇ ಹೇಳಿದರೂ ಅಡಿಕೆ ಕಳ್ಳ ದಾರಿಯ ಮೂಲಕ ಬರ್ಮಾ, ಬಾಂಗ್ಲಾದೇಶದಿಂದ ಬರುತ್ತಿತ್ತು. ಹೀಗಾಗಿ ಭಾರತದ ಅಡಿಕೆಗೆ ಧಾರಣೆ ಇಳಿಕೆಯಾಗುತ್ತಿತ್ತು. ಈ ಬಾರಿ ಅಡಿಕೆ ಕಳ್ಳದಾರಿಗೆ ಬ್ರೇಕ್ ಬಿದ್ದಿದೆ. ಹಾಗಾಗಿ ಮುಂಬಯಿ, ಉತ್ತರಪ್ರದೇಶ, ಗುಜರಾತ್  ಸೇರಿದಂತೆ ಉತ್ತರ ಭಾರತದಿಂದ ಅಡಿಕೆಗೆ ಬೇಡಿಕೆ ವ್ಯಕ್ತವಾಗಿದೆ. ಕೊರೊನಾ ಕಾರಣದಿಂದ ಉತ್ತರಭಾರತದಲ್ಲಿ ಇದ್ದ ಅಡಿಕೆ ದಾಸ್ತಾನು ಖಾಲಿಯಾಗಿದೆ.

ಈ ಕಡೆ ಕಳೆದ ವರ್ಷದ ಫಸಲಿನ ಕಾರಣದಿಂದ ಅಡಿಕೆ ಬೆಳೆ ಕಡಿಮೆ ಇದೆ. ಹೀಗಾಗಿ ಧಾರಣೆ ಎಷ್ಟೇ ಆದರೂ ಅಡಿಕೆ ಮಾರುಕಟ್ಟೆಗೆ ನೀಡುವ ಪ್ರಮಾಣ ಕಡಿಮೆಯೇ ಆಗಿದೆ. ಧಾರಣೆ ಏರಿಕೆಯಾಗುತ್ತಲೇ ಇದೆ. ಅಡಿಕೆ ಬೆಳೆಗಾರರು ಇನ್ನು ದೃಢ ನಿಲುವು ಮಾಡಿದರೆ ಅಡಿಕೆ ಮಾರುಕಟ್ಟೆ ಈ ಬಾರಿ ಏರಿಕೆಯಾಗುವುದು ನಿಶ್ಚಿತ. ಆದರೆ ಇನ್ನೊಂದು ಕಡೆ ಆತಂಕವೂ ಇದೆ. ಧಾರಣೆ ಎಗ್ಗಿಲ್ಲದೆ ಸಾಗಿದರೆ ಭವಿಷ್ಯದಲ್ಲಿ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದೆ. ಧಾರಣೆ ಏರಿಕೆ ಒಂದು ಹಂತದವರೆಗೆ ಮಾತ್ರವೇ ಉತ್ತಮ. ಅಧಿಕ ಪ್ರಮಾಣದಲ್ಲಿ ಏರಿಕೆಯಾದರೆ ಮಾರುಕಟ್ಟೆ ಸ್ಥಿರತೆ ಕಷ್ಟಸಾಧ್ಯವಿದೆ. ಹೀಗಾಗಿ ಅಡಿಕೆ ಬೆಳೆಗಾರರು ಭವಿಷ್ಯದ ಮಾರುಕಟ್ಟೆ ಬಗ್ಗೆಯೂ ಯೋಚಿಸಿ ನೂತನ ಯೋಜನೆ ರೂಪಿಸಬೇಕು ಎಂದು ಅಡಿಕೆ ಬೆಳೆಗಾರ ರಘುನಾಥ ರಾವ್ ಹೇಳುತ್ತಾರೆ.

ಅಡಿಕೆ ಮಾರುಕಟ್ಟೆ ಏರಿಕೆಯಾಗಿದೆ. ಇದಕ್ಕೆ ಪ್ರಮುಖ ಕಾರಣ ಉತ್ತರ ಭಾರತದಲ್ಲಿ ಅಡಿಕೆ ದಾಸ್ತಾನು ಕೊರತೆ. ಹೀಗಾಗಿ ಈಗ ಅಡಿಕೆ ಬೆಳೆಗಾರರು ಎಚ್ಚರಿಕೆ ನಡೆ , ಯೋಜನೆ ರೂಪಿಸಿಕೊಂಡು ಅಡಿಕೆ ಮಾರುಕಟ್ಟೆ ಬಿಟ್ಟರೆ ಧಾರಣೆಯನ್ನು ಕೆಲವು ಸಮಯದವರೆಗೆ ಹಿಡಿದಿರಿಸಬಹುದು. – ಅಶೋಕ್ ಕಿನಿಲ, ಅಧ್ಯಕ್ಷರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror