ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

January 3, 2020
7:36 PM

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು.

Advertisement
Advertisement

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯಇರುವಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿ ಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ದೋಂಟಿ ಬಳಕೆಗೆ ಸೂಕ್ತ ಪ್ರೋತ್ಸಾಹ ನೀಡಲು ಪ್ರಯತ್ನಿಸಲಾಗುವುದು.ರೈತರಗೆ ಇದು ವರದಾನವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದರು.

 

ದೋಂಟಿ ಸಂಶೋಧಕಹಾಗೂ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಮಾತನಾಡಿ, ಮಲೆನಾಡು ಪ್ರದೇಶದ ತೋಟಗಳಲ್ಲಿ ಈಗಾಗಲೆ ಇಪ್ಪತ್ತಕ್ಕೂ ಹೆಚ್ಚು ಇಂತಹ ದೋಂಟಿಗಳು ಬಳಕೆಯಲ್ಲಿವೆ. ಇದರಿಂದಾಗಿ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೆ ತಿಂಗಳಿಗೆ 70,000ರೂ. ಉಳಿತಾಯವಾಗುತ್ತದೆ ಎಂದು ಹೇಳಿದರು.
ಪ್ರಸಕ್ತದೋಂಟಿಯ ಬೆಲೆ 80,000ರೂ.ಆಗಿದ್ದು ಮುಂದೆರೈತರಿಗೆಕೈಗೆಟಕುವ ಮಿತದರದಲ್ಲಿ ಸಾಧಾರಣ ಹತ್ತು ಸಾವಿರರೂ.ಗೆದೊರಕುವಂತೆ ಮಾಡಲಾಗುವುದುಎಂದು ಬಾಲಸುಬ್ರಹ್ಮಣ್ಯ ಭರವಸೆ ನೀಡಿದರು.

Advertisement

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತುಕೃಷಿ ವಿಭಾಗದಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ದೋಂಟಿಯ ವಿಶೇಷತೆಗಳು:

• ಅಡಿಕೆ ಮರಏರದೆಕೊಯ್ಲು ಹಾಗೂ ಔಷಧಿ ಸಿಂಪಡಣೆ ಮಾಡಬಹುದು.
• 60 ರಿಂದ 80 ಅಡಿ ಎತ್ತರದದೋಂಟಿಅಗತ್ಯಕ್ಕೆ ಬೇಕಾದಷ್ಟು ಎತ್ತರಿಸಿ ಲಾಕ್ ಮಾಡುವ ವ್ಯವಸ್ಥೆ.
• ನಿಂತಲ್ಲೆ 360 ಡಿಗ್ರಿ ಸುತ್ತಮುತ್ತ ಹತ್ತು ಮರಗಳಿಗೆ ಔಷಧಿ ಸಿಂಪಡಣೆ ಸಾಧ್ಯ.
• ಫೈಬರ್  ತಂತ್ರಜ್ಞಾನ ಬಳಕೆ.  20 ವರ್ಷ ಬಾಳಿಕೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group