ಅಡ್ಕಾರ್ ಬಳಿ ಮತ್ತೆ ಅಪಘಾತ : ಕಾರು- ಲಾರಿ ಡಿಕ್ಕಿ

October 17, 2019
10:45 PM

ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ‌. ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror