ಅಣ್ಣಾಮಲೈ ಐಪಿಎಸ್ ಅವರಿಂದ ‘ನನ್ನ ದೇಶ-ನನ್ನ ಕನಸು’ ವಿಷಯದ ಕುರಿತು ವಿಶೇಷ ಉಪನ್ಯಾಸ

November 16, 2019
7:05 PM

ಪುತ್ತೂರು: ಪ್ರತಿಯೊಬ್ಬನ ಜೀವನದಲ್ಲಿ ಆತನಿಗೆ ಅರಿತಿರುವ ಸಾಮಾನ್ಯ ಜ್ಞಾನ ಮುಖ್ಯವಾಗುತ್ತದೆ. ಏಕೆಂದರೆ ಬದುಕಿಗೆ ಅನ್ನ ನೀಡುವುದು ಸಾಮಾನ್ಯಜ್ಞಾನ. ಈ ಜ್ಞಾನ ಸಮಾಜ ಎಲ್ಲ ಕ್ಷೇತ್ರಗಳ ವಿಷಯಗಳನ್ನು ಒಳಗೊಂಡಿರುವುದರಿಂದ ಎಲ್ಲಿ ಬೇಕಾದರೂ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಅದೇ ರೀತಿ ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲ ಅದರಲ್ಲಿ ಆಳವಾದ ಅಧ್ಯಯನವನ್ನು ಮಾಡುವುದು ಬಹು ಮುಖ್ಯ. ಯಾವುದೇ ವಿಷಯದಲ್ಲಿ ಅಥವಾ ಕ್ಷೇತ್ರದಲ್ಲಿ ನಾವು ಪರಿಣತರಾಗಬೇಕು. ಇದರ ಆವಶ್ಯಕತೆ ಇದೆ ಎಂದು ಅಣ್ಣಾಮಲೈ ಐಪಿಎಸ್ ಅಭಿಪ್ರಾಯಪಟ್ಟರು.

Advertisement

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನಸು-2019 ಕಾರ್ಯಕ್ರಮದಲ್ಲಿ ‘ನನ್ನ ದೇಶ-ನನ್ನ ಕನಸು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಸಿ ಶನಿವಾರ ಮಾತನಾಡಿದರು. ಹಸಿವು, ನೋವು ಗೊತ್ತಿರುವಾತ ಹಾಗೂ ನಿರೀಕ್ಷೆ ಇಲ್ಲದೆ ಕೆಲಸ ಮಾಡುವಾತ ಐಎಎಸ್, ಐಪಿಎಸ್ ಅಧಿಕಾರಿಯಾಗಲು ಸಾಧ್ಯ. ಏಕೆಂದರೆ ಕಷ್ಟ ಅನುಭವಿಸುವವನಿಗೆ ನೋವು ಅರ್ಥವಾಗುತ್ತದೆ. ಹಾಗೂ ಜನರ ಪ್ರತಿಯೊಂದು ಕಷ್ಟಗಳನ್ನು ಅರಿಯುವ ಮನಸ್ಸು ಬರುತ್ತದೆ.

ಇಂದು ಯಾವುದೇ ವಿಷಯದಲ್ಲಿ ಪದವಿಯನ್ನು ಮಾಡುವವರು ತಮ್ಮ ವಿಷಯದಲ್ಲಿ ಆಳವಾದ ಜ್ಞಾನ ಅಥವಾ ಅಧ್ಯಯನ ಅತ್ಯಗತ್ಯ. ಅದರೊಂದಿಗೆ ನಮ್ಮ ಆಚರಣೆ, ಪರಂಪರೆ, ಸಂಸ್ಕೃತಿಯಲ್ಲಿ ಸ್ಪಷ್ಟವಾದ ಉದ್ದೇಶವಿದೆ. ಎರಡೂವರೆ ಸಾವಿರ ವರ್ಷಗಳ ಪರಂಪರೆ ಇರುವ ಭಾರತೀಯ ಸಂಸ್ಕೃತಿಯನ್ನು ಇಂದು ವಿಜ್ಞಾನ ಕ್ಷೇತ್ರ ಒಪ್ಪಿಕೊಂಡಿದೆ ಎಂದರು.
ಗುರಿ ಚಿಕ್ಕವಯಸ್ಸಿನಲ್ಲೇ ಇರಬೇಕು, ಅಥವಾ ಪೋಷಕರ ಒತ್ತಡದಿಂದಲೋ ಜೀವನದ ಗುರಿ ನಿರ್ಧರಿಸುವ ಅವಶ್ಯಕತೆ ಇಲ್ಲ. ಬದುಕನ್ನು ತಿಳಿದುಕೊಳ್ಳುತ್ತಾ ಹೋದಂತೆ ಹೊಸತನ್ನು ತಿಳಿಯುತ್ತಾ ಹೋಗುತ್ತೇವೆ. ಆಗ ಏನು ಸಾಧಿಸಬೇಕು ಎಂದು ತಿಳಿಯುತ್ತದೆ, ಹಾಗಾಗಿ ಚಿಕ್ಕವಯಸ್ಸಿನಲ್ಲೇ ಗುರಿ ಇರಿಸಿಕೊಳ್ಳಬೇಕು ಎಂಬ ಅವಶ್ಯಕತೆ ಇಲ್ಲ. ಏಕೆಂದರೆ ಮನಸ್ಸಿನಲ್ಲಿ ಗುರಿಯತ್ತ ಚಂಚಲತೆ ಇದ್ದರೆ ಹಾಗೂ ಹಲವಾರು ಗುರಿಗಳಿದ್ದರೆ ಅದು ಜೀವನದ ಬಗ್ಗೆ ಇರುವ ಉತ್ಸಾಹ. ಏಕೆಂದರೆ ಇಂದು ಬೇಗ ಬೆಳೆಯುತ್ತಿರುವ ಸಮಾಜ, ಬದಲಾಗುತ್ತಿರುವ ಮನಸ್ಥಿತಿ. ಹಾಗಾಗಿ ಚಂಚಲತೆ ಚಿಕ್ಕವಯಸ್ಸಿನಲ್ಲಿದ್ದರೆ ಅದು ಯೋಚಿಸುವ ಸಂಗತಿಯಲ್ಲ ಎಂದರು.

ಕಾಲೇಜಿನ ತರಗತಿಯಲ್ಲಿ ಕೊನೆಯ ಬೆಂಚಿನಲ್ಲಿ ಕುಳಿತುಕೊಳ್ಳುವ ಮಕ್ಕಳು ಹೆಚ್ಚಾಗಿ ಗೆಲ್ಲುತ್ತಾರೆ ಎಂದು ಎಲ್ಲರು ಹೇಳುವ ಮಾತು. ಏಕೆಂದರೆ ಮೊದಲಿನಿಂದಲೂ ಅವರು ಯಾವುದನ್ನು ಯೋಚಿಸುತ್ತಾ ಬಂದಿರುವುದಿಲ್ಲ. ಆದರೆ ಜೀವನದಲ್ಲಿ ಒಮ್ಮೆ ಸಮಾಜದ ಮಾತುಗಳ ಎದುರಿಸಿ ಏನಾದರು ಸಾಧಿಸಬೇಕು ಎಂಬ ಛಲ ಬರುತ್ತದೆ. ಅದುವೇ ಅವರ ಜೀವನದ ತಿರುವಿನ ಹಂತವಾಗುತ್ತದೆ. ಹಾಗೂ ಅವರು ಗೆಲ್ಲಲೇ ಬೇಕು ಎಂಬ ಹಟವನ್ನು ಹೊತ್ತು ಮುನ್ನಡೆಯುತ್ತಾರೆ. ಆದರೆ ಚೆನ್ನಾಗಿ ಓದುವವರು ಓದುತ್ತಿರುವ ಕಾರಣವನ್ನು ತಿಳಿದು ಓದಿದರೆ ಗೆಲುವು ಲಭಿಸುತ್ತದೆ ಎಂದರು.

ಇಂದು ಹೆಚ್ಚು ಮಂದಿ ಸಿವಿಲ್ ಸರ್ವಿಸ್‍ಗೆ ಬರುತ್ತಿರುವವರು ಅಹಂ ಇರಿಸಿಕೊಂಡು ಬರುತ್ತಿದ್ದಾರೆ. ಅಂದರೆ ಕೆಲವರು ಸಾಧಿಸುವುದಕ್ಕಾಗಿ, ನಾನೂ ಹೆಚ್ಚು ತಿಳಿದವ ಎಂದು ತೋರಿಸಲು, ಪ್ರತಿಷ್ಠೆಯನ್ನು ತೋರಿಸಲು. ಆದರೆ ನಿಜವಾಗಿಯೂ ಯಾವುದೇ ವ್ಯಕ್ತಿ ಸೇವೆ ಮಾಡಬೇಕು ಎಂಬ ಮನಸ್ಸು ಇಟ್ಟು ಬರುವುದು ಕಡಿಮೆ. ಗ್ರಾಮಗಳಲ್ಲಿ ಬೆಳೆದ ಜನರು ಸೇವಾ ಮನೋಭಾವ ಇರಿಸಿ ಬರುತ್ತಾರೆ ಆದರೆ ಅದು ಅತಿ ವಿರಳ.

ಧರ್ಮಗಳು ಹೇಳುವುದು ಏನು, ಯಾವಾಗ ಬಂದಿದ್ದು ಅದರ ಮೂಲ ಉದ್ದೇಶವನ್ನು ಅದರ ಒಳಗಿದ್ದು ಅರಿತರೆ ಮಾತ್ರ ನಿಜವಾದ ಧರ್ಮ ಏನು ಎಂದು ತಿಳಿಯುತ್ತದೆ. ಹಾಗೂ ಧರ್ಮದ ಬಗ್ಗೆ ತಿಳಿದ, ಅರ್ಥೈಸಿದ ವಿಚಾರಗಳು ತಪ್ಪು ಎಂದು ತಿಳಿಯುತ್ತದೆ. ಆಗ ನಡೆಯುತ್ತಿರುವ, ಮುಂದೆ ನಡೆಯುವ ಕೋಮುಗಲಭೆಗಳನ್ನು ತಡೆಯಬಹುದು. ಏಕೆಂದರೆ ಎಲ್ಲದರ ಮೂಲವೂ ಒಂದೆ ಹಾಗೂ ಅವು ಒಂದಲ್ಲಾ ಒಂದು ರೀತಿಯಲ್ಲಿ ವಿಜ್ಞಾನವನ್ನೇ ಹೇಳುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ. ಮಂಜುನಾಥ ಉಪಸ್ಥಿತರಿದ್ದರು. ವಿನಯ್ ಜಾದವ್ ವಂದಿಸಿದರು. ಬೌತ್ತಶಾಸ್ತ್ರ ಉಪನ್ಯಾಸಕಿ ದೀಕ್ಷಿತ ಸ್ವಾಗತಿಸಿ, ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror