ಅಧಿಕಾರದ ಹಿಂದೆ ಬಿದ್ದಿಲ್ಲ….. ಪಕ್ಷ ಸಂಘಟನೆಯಲ್ಲಿ ಸಕ್ರೀಯನಾಗುತ್ತೇನೆ – ಶಾಸಕ ಅಂಗಾರ

August 29, 2019
9:34 PM

ಮಂಗಳೂರು: ನಾನು ಅಧಿಕಾರದ ಹಿಂದೆ ಎಂದೂ ಹೋಗಿಲ್ಲ. ಈಗಲೂ ಅಧಿಕಾರದ ಹಿಂದೆ ಬಿದ್ದಿಲ್ಲ. ಪಕ್ಷ ಮತ್ತು ಸಂಘಟನೆಯ ವಿಚಾರಧಾರೆಯಡಿ ಬೆಳೆದು ಬಂದ ಕಾರಣ ಅಧಿಕಾರದ ಆಸೆ ಇಲ್ಲ‌. ನನ್ನ ಬಗ್ಗೆ ಸಂಶಯ ಬೇಡ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಜತೆಗಿದ್ದು ಪೂರ್ಣ ಪ್ರಮಾಣದಲ್ಲಿ ಸಕ್ರೀಯರಾಗುತ್ತೇನೆ. ಕ್ಷೇತ್ರದ ಜನರ ಸೇವೆ ನಿರಂತರವಾಗಿ ಮಾಡುತ್ತೇನೆ ಹೀಗೆಂದವರು ಸುಳ್ಯ ಶಾಸಕ ಎಸ್.ಅಂಗಾರ.

Advertisement
Advertisement

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜಿಲ್ಲಾ ಬಿಜೆಪಿಯಿಂದ ನೀಡಲಾದ ಅಭಿನಂದನಾ ಸಮಾರಂಭದಲ್ಲಿ ಅಂಗಾರರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.

ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಳಿನ್ ಕುಮಾರ್ ಕೂಡ ಅಂಗಾರರ ಹಿರಿತನವನ್ನೂ, ಸರಳತೆಯನ್ನು ಕೊಂಡಾಡಿದರು. ಶಾಸಕ ಅಂಗಾರ ಅವರನ್ನು ಉಲ್ಲೇಖಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಅಹಂಕಾರ ತೋರಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಯಾರ ಮನೆ ಬಾಗಿಲಿಗೂ ಸೀಟಿಗಾಗಿ ಅಲೆದಾಡಿಲ್ಲ ಎಂದರು‌. ನಾನು ಕೂಡಾ ರಾಜ್ಯಾಧ್ಯಕ್ಷ ಸ್ಥಾನವನ್ನು ಬಯಸಿಲ್ಲ. ಸಂಘದ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡು ಸಮಾಜಕ್ಕಾಗಿ ದುಡಿದ ಕಾರಣ ಅವಕಾಶ ಬಂದಿದೆ ಎಂದರು‌.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group