ಅಧಿಕಾರದ ಹಿಂದೆ ಹೋಗುವುದಿಲ್ಲ….ಅರಸಿ ಬಂದರೆ ಸ್ವೀಕರಿಸುತ್ತೇನೆ…..ಶಾಸಕ ಅಂಗಾರ ಮನದಾಳದ ಮಾತು‌‌‌

August 15, 2019
1:02 PM

ಸುಳ್ಯ:ರಾಜ್ಯ ಸರಕಾರದಲ್ಲಿ ಸಚಿವರಾಗಿ, ಮಂತ್ರಿಯಾಗಿ ಬನ್ನಿ ಎಂದು ಹಲವಾರು ಮಂದಿ ಹಾರೈಸಿದ್ದಾರೆ. ಆದರೆ ಅಧಿಕಾರಕ್ಕಾಗಿ ಎಂದೂ ಬೇಡಿಕೆ ಇಡುವುದಿಲ್ಲ.. ಅಧಿಕಾರ ಅರಸಿ ಬಂದರೆ ವಿನಮ್ರತೆಯಿಂದ ಸ್ವೀಕರಿಸುತ್ತೇನೆ.. ಹೀಗೆ ತನ್ನ ಮನದಾಳವನ್ನು ಬಿಚ್ಚಿಟ್ಟವರು ಶಾಸಕ ಎಸ್.ಅಂಗಾರ.

Advertisement
Advertisement

ಸುಳ್ಯದಲ್ಲಿ ನಡೆದ ಸ್ಚಾತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದಲ್ಲಿ ಅಂಗಾರರು ಸಚಿವರಾಗುತ್ತಾರೆ ಎಂಬ ಚರ್ಚೆಗಳು ಗರಿಗೆದರುತ್ತಿರುವ ಸಂದರ್ಭದಲ್ಲಿ ಅವರು ತಮ್ಮ ಮನದಾಳವನ್ನು ಬಿಚ್ಚಿಟ್ಟರು.

ಅಧಿಕಾರದ ಹಿಂದೆ ಇದುವರೆಗೆ ಹೋಗಿಲ್ಲ ಇನ್ನೂ ಹೋಗುವುದಿಲ್ಲ. ಸಂಘಟನೆಯ ತತ್ವ ಸಿದ್ಧಾಂತಗಳ ಆಧಾರದಲ್ಲಿ ಬೆಳೆದು ಬಂದು ಸಂಘಟನೆಯ ಆಶಯದಂತೆ ಜನರ ಆಶೀರ್ವಾದದೊಂದಿಗೆ ಜನಪ್ರತಿನಿಧಿಯಾಗಿದ್ದೇನೆ. ಸಂಘಟನೆಗೆ ಅದರದ್ದೇ ಆದ, ತತ್ವ, ವಿಚಾರ, ಉದ್ದೇಶಗಳಿವೆ. ನನಗೆ ಅಧಿಕಾರಕ್ಕಿಂತ ಅದೇ ಮುಖ್ಯ. ಆಧಿಕಾರ ದೊರೆತರೆ ಅನೇಕ ಅಪೇಕ್ಷೆಗಳು ಸವಾಲುಗಳು ಇದೆ, ಅದರ ಬಗ್ಗೆ ಅರಿವಿದೆ ಆ ಸವಾಲುಗಳನ್ನು ಎದುರಿಸಲು ಅಪೇಕ್ಷೆಗಳನ್ನು ಈಡೇರಿಸಲು ಜನರ ಸಹಕಾರ ಅತೀ ಮುಖ್ಯ ಎಂದು ಅವರು ಹೇಳಿದರು.

ಮಂತ್ರಿಯಾಗಿ ಹಿರಿಯರ ಆಶೀರ್ವಾದ:
ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ವಾಣೀಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ ಮತ್ತಿತರರು ಅಂಗಾರರು ಸಚಿವರಾಗಲಿ ಎಂದು ಹಾರೈಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group