ಅನ್ನ ಎಸೆಯಬೇಡಿ-ಇದರ ಬೆಲೆ ತಿಳಿಯಿರಿ | ಅನ್ನದಾನದ ಕ್ಷೇತ್ರದಲ್ಲಿ ನಡೆದ ನೋವಿನ ಕತೆ ಏನಿದು ? | ತಕ್ಷಣ ಎಚ್ಚೆತ್ತ ಅಧಿಕಾರಿಗಳು, ಗ್ರಾಮಸ್ಥರು |

May 11, 2020
4:10 PM

ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್. ಸರಕಾರ ಬಡ ಜನರು ಹಸಿವಿನಿಂದ ಬಳಲಬಾರದು ಎಂದು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ವಿವಿಧ ಸಂಘ ಸಂಸ್ಥೆಗಳು ನಿರಂತರ ಶ್ರಮ ವಹಿಸುತ್ತಿವೆ, ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಎಲ್ಲರದೂ ಒಂದೇ ಕೆಲಸ ಬಡವರು ಹಸಿವಿನಿಂದ ಬಳಲಬಾರದು. ಅನೇಕರು ತಾವು ಹಸಿವಿನಿಂದ ಇದ್ದರೂ ಸೇವೆಯಲ್ಲೇ ತೊಡಗಿದ್ದಾರೆ. ಆದರೆ ಇದೊಂದು ಘಟನೆ ತೀರಾ ವಿಷಾದನೀಯ. ಏನಿದು ?

 

Advertisement

ಬಡವರು, ನಿರಾಶ್ರಿತ ಜನರು ಹಸಿವಿನಿಂದ ಬಳಲಬಾರದು ಎಂದು  ಸರಕಾರ ವ್ಯವಸ್ಥೆ ಮಾಡಿದೆ. ಇದರ ಭಾಗವಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಅಭಯ ವಸತಿಗೃಹದಲ್ಲಿ ಹೊರರಾಜ್ಯದಿಂದ ವಲಸೆ ಬಂದ ಕಾಮಿ೯ಕ ನಿರಾಶ್ರಿತರಿಗೆ ವಸತಿ ವ್ಯವಸ್ಥೆ ಹಾಗೂ  ದೇವಸ್ಥಾನದ ವತಿಯಿಂದ ಉಚಿತ ಭೋಜನ ವ್ಯವಸ್ಥೆ ಮಾಡಿದೆ. ದೇವಸ್ಥಾನದಲ್ಲಿ  ಪ್ರತಿನಿತ್ಯವೂ ಬೆಳ್ತಿಗೆ ಅಕ್ಕಿಯಿಂದ ಮಾಡಿದ ಊಟವನ್ನೇ ಪ್ರಸಾದದ ರೂಪದಲ್ಲಿ  ನೀಡಲಾಗುತ್ತದೆ. ಈ ಬಾರಿಯೂ ಅದೇ ನೀಡಲಾಗಿತ್ತು. ಅಧಿಕಾರಿಗಳು, ಸ್ಥಳೀಯ ಕಾರ್ಯಕರ್ತರು ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರು. ಆದರೆ ಸೋಮವಾರ ಬೆಳಗ್ಗೆ ಅನ್ನವನ್ನು ಚೆಲ್ಲುವ ದೃಶ್ಯ ಕಂಡುಬಂತು. ಇದಕ್ಕೆ ವ್ಯಾಪಕವಾದ ಅಸಮಾಧಾನ ಕೇಳಿ ಬಂದಿದೆ. ಅನ್ನ ಚೆಲ್ಲಿರುವುದು  ತಿಳಿದಂತೆಯೇ ದೇವಸ್ಥಾನದ ಆಡಳಿತ ಹಾಗೂ ಸಾಮಾಜಿಕ ಕಾರ್ಯಕರ್ತರು ತಕ್ಷಣವೇ ಈ ಬಗ್ಗೆ ಜಾಗೃತರಾಗಿ  ಏಕೆ ಎಸೆದಿದ್ದಾರೆ ಎಂದು  ಗಮನಿಸಿದ್ದಾರೆ. ಇಂದಿನಿಂದಲೇ ಅನ್ನದ ಬದಲು ಚಪಾತಿ ಅಥವಾ ಪರ್ಯಾಯ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ.

Advertisement

ಆದರೆ ಅನ್ನವನ್ನು  ಈ ಮಾದರಿಯಲ್ಲಿ  ಚೆಲ್ಲುವುದು  ಯಾವತ್ತೂ ಸರಿಯಲ್ಲ. ಅನ್ನದ ಮಹತ್ವವನ್ನು  ಎಲ್ಲರಿಗೂ ತಿಳಿಸಲೇಬೇಕಾದ ಅಗತ್ಯವಿದೆ. ದೇಶದಲ್ಲಿ  ಅನ್ನಕ್ಕಾಗಿ ಪರದಾಟ ಮಾಡುವ ಮಂದಿ  ಇದ್ದಾರೆ. ಎಲ್ಲೇ ಆಗಲಿ ರೈತ ಶ್ರಮಪಟ್ಟು ಬೆಳೆದ ಭತ್ತವನ್ನು ಅಕ್ಕಿಯ ರೂಪದಲ್ಲಿ ಸಿಗುವವರೆಗೆ ಅನೇಕರ ಶ್ರಮ ಇದೆ. ಈ ಎಲ್ಲಾ ಬೆವರಹನಿಗಳು ಸೇರಿ ಶ್ರದ್ಧಾ ಕೇಂದ್ರಗಳಲ್ಲಿ  ಪ್ರಸಾದದ ರೂಪದಲ್ಲಿ  ಸಿಕ್ಕಿದರೆ ಮನೆಗಳಲ್ಲಿ ಅನ್ನವಾಗಿ ಸಿಗುತ್ತದೆ. ಹೀಗಾಗಿ ಹೀಗೆ ಎಸೆಯುವ ಮಂದಿಗೆ ಜಾಗೃತಿ ಮೂಡಿಸಬೇಕಿದೆ. ಅನ್ನದ ಶ್ರೇಷ್ಟತೆ ತಿಳಿಸಬೇಕಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror