ಅಬ್ಬಕ್ಕ ಉತ್ಸವ – ಕಲಾತಂಡಗಳಿಂದ ಅರ್ಜಿ ಆಹ್ವಾನ

February 6, 2020
11:31 AM

ಮಂಗಳೂರು : ದ.ಕ ಜಿಲ್ಲೆ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಉತ್ಸವವನ್ನು 2020ರ ಫೆಬ್ರವರಿ ತಿಂಗಳಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದೆ. ಅಬ್ಬಕ್ಕ ಉತ್ಸವ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement

ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳು ಮತ್ತು ನಿರೀಕ್ಷಿಸುವ ಸಂಭಾವನೆ ವಿವರಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು ಇವರಿಗೆ ಫೆಬ್ರವರಿ 10 ರೊಳಗೆ ಸಲ್ಲಿಸಬೇಕು.

ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯದ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಅಬ್ಬಕ್ಕ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ
April 12, 2025
8:44 PM
by: The Rural Mirror ಸುದ್ದಿಜಾಲ
ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ
April 9, 2025
7:03 PM
by: The Rural Mirror ಸುದ್ದಿಜಾಲ
ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ
April 9, 2025
7:36 AM
by: ದ ರೂರಲ್ ಮಿರರ್.ಕಾಂ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group