ಅರಂತೋಡಿನಲ್ಲಿ ತಾಲೂಕು ಮಟ್ಟದ ಸ್ವಚ್ಚ ಮೇವ ಜಯತೇ ಆಂದೋಲನಕ್ಕೆ ಚಾಲನೆ

June 11, 2019
2:38 PM
ಅರಂತೋಡು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ ಹಾಗೂ ಅರಂತೋಡು ಗ್ರಾ.ಪಂ ಸಹಯೋಗದಲ್ಲಿ ತಾಲೂಕು ಮಟ್ಟದ ಸ್ವಚ್ಚ ಮೇವ ಜಯತೇ ಆಂದೋಲನ ಉದ್ಘಾಟನಾ ಕಾರ್ಯಕ್ರಮ ಅರಂತೋಡು -ತೊಡಿಕಾನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಶಾಸಕ ಎಸ್. ಅಂಗಾರ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್ ಸ್ವಚ್ಚತಾ ರಥಕ್ಕೆ ಚಾಲನೆ ನೀಡಿದರು.
ತಾಲೂಕು ಸ್ವಚ್ಛತಾ ಜಾಥಕ್ಕೆ ಸುಳ್ಯ ತಾ.ಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಚಾಲನೆ ನೀಡಿದರು. ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಭಿತ್ತಿಪತ್ರ ಮತ್ತು ಕರಪತ್ರ ಬಿಡುಗಡೆ ಮಾಡಿದರು.  ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯರಾದ ಎಸ್.ಎನ್.ಮನ್ಮಥ, ಪುಪ್ಪಾವತಿ ಬಾಳಿಲ, ತಾ.ಪಂ ಸದಸ್ಯೆ ಪುಪ್ಪಾ ಮೇದಪ್ಪ ಗೌಡ, ಅರಂತೋಡು ಗ್ರಾ.ಪಂ ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಗ್ರಾ.ಪಂ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು- ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್, ಅರಂತೋಡು ಪ್ರೌಢಶಾಲಾ ಮುಖ್ಯಗುರು ಆನಂದ , ಸುಳ್ಯ ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ಮಧುಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪ್ರೀತಿ ನಾಯ್ಕ್, ತಾ.ಪಂ ಸಹಾಯಕ ನಿದೇರ್ಶಕ ಉದ್ಯೋಗ ಖಾತರಿ ಯೋಜನೆ ಭವಾನಿಶಂಕರ, ಪಿಡ್ಬ್ಯುಡಿ ಇಂಜಿನಿಯರ್ ಹನುಮಂತಪ್ಪ, ಸಿಡಿಪಿಒ ಮೇಲ್ವಿಚಾರಕಿ ರವಿ ಶ್ರೀ, ತೋಟಗಾರಿಕಾ ಇಲಾಖೆಯ ಮಧುಶ್ರೀ,  ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಜಯಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror