ಅರಂತೋಡು ಮಸೀದಿಯಲ್ಲಿ ಈದ್ ಮಿಲಾದ್ ಫೆಸ್ಟಿವಲ್‌ ಸಮಾರೋಪ ಸಮಾರಂಭ

November 10, 2019
1:19 PM

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.10ರಂದು ಈದ್ ಮಿಲಾದ್ ಫೆಸ್ಟಿವಲ್‌ ಕಾರ್ಯಕ್ರಮದ ಸಮಾರೋಪ ಸಮಾರಂಭ ಅರಂತೋಡು ಮಸೀದಿ ವಠಾರದಲ್ಲಿ ನಡೆಯಿತು.

ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಧ್ವಜಾರೋಹಣ ನೇರವೆರಿಸಿದ್ದರು. ಬಳಿಕ ಮಿಲಾದ್ ಜಾಥಾವು ಮಸೀದಿಯಿಂದ ಹೊರಟು ತೆಕ್ಕಿಲ್ ಟಿ.ಎಮ್ ಶಹೀದ್ ನಿವಾಸಕ್ಕೆ ತೆರಳಿ ಅಲ್ಲಿಂದ ಉದಯನಗರದವರೆಗೆ ಸಂಚರಿಸಿ ಮಸೀದಿ ಬಳಿ ಸಮಾಪ್ತಿಗೊಂಡಿತ್ತು. ದಾರಿ ಉದ್ದಕ್ಕೂಸಿಹಿ ತಿಂಡಿ ನೀಡಿ ಸಹಕರಿಸಿದರು. ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷತೆ ವಹಿಸಿದ್ದರು.

ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ಸ್ಪರ್ಧೆ, ಹಾಡು, ಭಾಷಣಗಳ ಸ್ಪರ್ಧೆಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮವನ್ನು ನವಾಜ್ ದಾರಿಮಿ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಅಧ್ಯಾಪಕರಾದ ಬಹು ನವಾಜ್ ದಾರಿಮಿ, ಸಹ ಅಧ್ಯಾಪಕರಾದ ಬಶೀರ್ ದಾರಿಮಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಟಿ.ಎಮ್ ಬಾಬ ಹಾಜಿ ತೆಕ್ಕಿಲ್, ಎನ್ ಐ. ಮದರಸ ಮ್ಯಾನೇಜ್‌ಮೆಂಟ್ ಸಂಚಾಲಕ ಮೂಸಾನ್ ಕೆ.ಎಮ್, ಹಾಜಿ ಎಸ್.ಇ.ಮಹಮ್ಮದ್, ಅರಂತೋಡು ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ, ಮಾಜಿ ಅಧ್ಯಕ್ಷರಾದ ಹಾಜಿ ಅಹ್ಮದ್ ಪಠೇಲ್ ಅನಿವಾಸಿ ಭಾರತೀಯರಾದ ಬದುರುದ್ದೀನ್ ಪಠೇಲ್, ಜಾವೇದ್ ಪೆಲ್ತಡ್ಕ, ಅಶ್ರಫ್ ಅದೂರು, ಸಮದ್ ಗುಂಡಿ, ವಹಾಬ್ ಕುಕ್ಕುಂಬಳ, ಅರಂತೋಡು ಶಾಖೆ ಅಧ್ಯಕ್ಷ ಆಶೀಕ್ ಕುಕ್ಕುಂಬಳ, ಎಸೋಸಿಯೆಶನ್ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಕಾರ್ಯದರ್ಶಿ ಫಸೀಲು , ಹನೀಫ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಮಜೀದ್ ಸ್ವಾಗತಿಸಿ, ಅಶ್ರಫ್ ಗುಂಡಿ ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror