ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

September 22, 2019
5:00 PM

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ.  ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group