ಅರೆಭಾಷೆ ಅಕಾಡೆಮಿ ನೇಮಕಾತಿಗೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

October 16, 2019
12:58 PM

ಸುಳ್ಯ: ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯ ಪಟ್ಟಿ ಹೊರ ಬೀಳುತ್ತಿದ್ದಂತೆ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

ಪಕ್ಷದ ಗಮನಕ್ಕೆ ಬಾರದೇ ನೇಮಕಾತಿ ನಡೆದಿದೆ ಎಂಬುದು ಪಕ್ಷದ ಮುಖಂಡರ ಆಕ್ಷೇಪ. ಅರೆ ಭಾಷಿಕರಾದ ಗೌಡ ಸಮುದಾಯದ ಹಲವು ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ‌. ಅವರಲ್ಲಿ ಕೆಲವರಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷತೆ, ಸದಸ್ಯತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಪಕ್ಷದ ಸಕ್ರೀಯ ನಾಯಕರನ್ನು, ಸದಸ್ಯರನ್ನು ನೇಮಕಾತಿ ಸಂದರ್ಭ ಕಡೆಗಣಿಸಲಾಗಿದೆ ಎಂಬ ಆರೋಪ, ಆಕ್ರೋಶ ಇದೀಗ  ಕೆಲವು ನಾಯಕರಲ್ಲಿ ಮತ್ತು  ಕಾರ್ಯಕರ್ತರಲ್ಲಿ ಉಂಟಾಗಿದೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದ ಕಾರಣ ಸುಳ್ಯದಲ್ಲಿ ಭಾರೀ ಆಕ್ರೋಶ ಅಸಮಾಧಾನ ಉಂಟಾಗಿತ್ತು. ಅದು ಸ್ವಲ್ಪ ತಣ್ಣಗಾಗಿರುವ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿ ನೇಮಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೆಲವು ಮಂದಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯತ್ವಕ್ಕೆ ತೆರೆಮರೆಯಲ್ಲಿ ಪ್ರಯತ್ನವೂ ನಡೆಸಿದ್ದರು. ಆದರೆ ಇದೀಗ ಹೊರ ಬಂದಿರುವ ಪಟ್ಟಿ ಸುಳ್ಯ ಬಿಜೆಪಿಗರಿಗೆ ಅಚ್ಚರಿ ಮೂಡಿಸಿದೆ.

ಈ ಹಿಂದೆ‌‌‌ ಡಿಸಿಸಿ ಬ್ಯಾಂಕ್ ಚುನಾವಣೆ, ಸುಳ್ಯ ಶಾಸಕ ಅಂಗಾರ ಅವರಿಗೆ‌ ಸಚಿವ ಸ್ಥಾನ ಸೇರಿದಂತೆ ಇದೀಗ ಅರೆಭಾಷೆ ಅಕಾಡೆಮಿ ಆಯ್ಕೆ ಕೂಡಾ ಅಸಮಾಧಾನಕ್ಕೆ ಕಾರಣವಾಗಿದೆ.

ಅರೆಭಾಷೆ ಅಕಾಡೆಮಿಯ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯ ಮೊದಲು ಮಂಡಲ ಸಮಿತಿಗೆ ತಿಳಿದಿರಲಿಲ್ಲ. ಇದೀಗ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಪಕ್ಷದ ಗಮನಕ್ಕೆ ಬಂದಿದೆ ಈ ಕುರಿತು ಪರಿಶೀಲಿಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror