ಅವಳು ಬದುಕುತ್ತಿದ್ದಾಳೆ

July 10, 2019
11:00 AM
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror