ಆ.14 : ಸುಳ್ಯದಲ್ಲಿ ಟ್ರಝರ್ ಹಂಟ್ ಫಾರ್ ಪ್ಲಾಸ್ಟಿಕ್….. ಪ್ಲಾಸ್ಟಿಕ್ ನಿರ್ಮೂಲನಾ ವಿಶಿಷ್ಟ ಜಾಥಾ

August 13, 2019
10:33 PM

ಸುಳ್ಯ: ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಮತ್ತು ಸ್ವಚ್ಛ ನಗರ ಸುಳ್ಯದ ಸಹಭಾಗಿತ್ವದಲ್ಲಿ ವಿಭಿನ್ನ‌ ರೀತಿಯಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಜಾಥ ನಡೆಯಲಿದೆ.

Advertisement

ಆ.14 ರಂದು ಬೆಳಿಗ್ಗೆ 10 ಗಂಟೆಗೆ ಚೆನ್ನಕೇಶವ ದೇವಾಲಯದ ಆವರಣದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜ ಹಾರಿಸುವ ಮೂಲಕ ಬೈಕ್ ಜಾಥಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ” ಟ್ರೆಝರ್ ಹಂಟ್ ಫಾರ್ ಪ್ಲಾಸ್ಟಿಕ್ “ ಚಳುವಳಿ ನಡೆಯಲಿದೆ.ಈ ಬೃಹತ್ ಜಾಥ ಸುಳ್ಯ ಪ್ಲಾಸ್ಟಿಕ್ ಮುಕ್ತ ನಗರವಾಗಿ ಪರಿಣಮಿಸಲು ನಾಂದಿ ಹಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಸ್ವಚ್ಛ ಸುಳ್ಯ-ಸುಂದರ ಸುಳ್ಯ ಪರಿಕಲ್ಪನೆಯನ್ನು ಸಾಕಾರಗೊಳಸುವತ್ತ ಮತ್ತೊಂದು ಹೆಜ್ಜೆ ಈ ಕಾರ್ಯಕ್ರಮ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ತಮ್ಮ ದ್ವಿಚಕ್ರ ವಾಹನ( ಬೈಕ್, ಆಕ್ಟಿವಾ)ದಲ್ಲಿ ಹಿಂಬದಿ ಸವಾರರೊಂದಿಗೆ ನಗರದಾದ್ಯಂತ ಸಂಚರಿಸಲಿರುವರು.ಪ್ಲಾಸ್ಟಿಕ್ ತ್ಯಾಜ್ಯ ಕಂಡಲ್ಲಿ ಹಿಂಬದಿ ಸವಾರರು ಅದನ್ನು ಹೆಕ್ಕಿ ತಮ್ಮೊಂದಿಗೆ ತಂದ ಕೈಚೀಲದಲ್ಲಿ ಹಾಕುವರು.

ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ , ಪೈಚಾರ್ ತನಕ ಕಸ ಸಂಗ್ರಹಿಸಿ ಪುನಃ ಚೆನ್ನಕೇಶವ ದೇವಸ್ಥಾನದ ಬಳಿ ಕಾರ್ಯಕ್ರಮ ಸಂಪನ್ನಗೊಳಲ್ಲಿದೆ.

Advertisement

ಇದರಲ್ಲಿ ಭಾಗವಹಿಸಲು ಸರ್ವರಿಗೂ ಮುಕ್ತ ಅವಕಾಶ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group