ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಆ.23 ರಂದು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.
ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಲಿದ್ದಾರೆ.ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸುವರು.ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ , ನ್ಯಾಯವಾದಿ ವಿಶ್ವನಾಥ ದೇವಸ್ಯ ಭಾಗವಹಿಸುವರು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ ಸಭಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಗುತ್ತಿಗಾರು ಸರಕಾರಿ ಕಾಲೇಜು ದ್ವಿತೀಯ ದರ್ಜೆ ಸಹಾಯಕ ಸೋಮಶೇಖರ ಮಾವಜಿ ಭಾಗವಹಿಸುವರು. ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel