ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯಿಂದ ಸರಕಾರಿ ಶಾಲೆಗಳ ಪುನಶ್ಚೇತನ

June 7, 2019
9:00 AM

ಬೆಳ್ಳಾರೆ :  ಆಂಗ್ಲಮಾಧ್ಯಮದ ಶಿಕ್ಷಣ ವ್ಯವಸ್ಥೆಯಿಂದ ಸರಕಾರಿ   ಶಾಲೆಗಳ ಗುಣಮಟ್ಟವೂ ಹೆಚ್ಚುತ್ತದೆ. ಆಂಗ್ಲ ಮಾಧ್ಯಮ ಶಿಕ್ಷಣದ ಯೋಜನೆಯು ಸರಕಾರಿ ಶಾಲೆಗಳ ಪುನಶ್ಚೇತನಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು.

Advertisement
Advertisement

ಅವರು ಮುರುಳ್ಯದ ಸ ಹಿ ಪ್ರಾ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರು. ಇಂದು ಜನರ ಅಪೇಕ್ಷೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವುದಾಗಿರುತ್ತದೆ. ಖಾಸಗಿ ವ್ಯವಸ್ಥೆಗಳ ಉಪಟಳದಿಂದಾಗಿ ಸರಕಾರಿ ಶಾಲೆಗಳು ಕಡಿಮೆಯಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾದ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್ ಮಾತನಾಡಿ ಆಂಗ್ಲ ಭಾಷೆಯಲ್ಲಿ ವಿದ್ಯಾರ್ಜನೆಗೈದವರು ಬುದ್ದಿವಂತರಲ್ಲ, ಸರಕಾರಿ ಶಾಲಾ ವಿದ್ಯಾರ್ಥಿಗಳು ದಡ್ಡರಲ್ಲ. ಸರಕಾರಿ ಉದ್ಯೋಗಿಗಳ ಪೈಕಿ ಬಹುತೇಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲುಗೈಯಾಗಿದೆ ಎಂದರು.

ತರಗತಿ ಕೊಠಡಿಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ ಉದ್ಘಾಟಿಸಿದರು. ಸ್ಮಾರ್ಟ್ ಟಿ.ವಿಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಶಾಲಾರ್ಪಣೆಗೊಳಿಸಿದರು. ಆಟದ ಮನೆಯನ್ನು ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದ ಎಸ್.ರೈ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ ದೀಪ ಬೆಳಗಿದರು. ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ ರಂಗಮನೆಗೆ ಒಂದು ಲಕ್ಷ ರೂಪಾಯಿಗಳ ಅನುದಾನ ನೀಡಿದ್ದು, ಇನ್ನೂ ಹೆಚ್ಚಿನ ಅನುದಾನ ಒದಗಿಸಲು ಭರವಸೆ ನೀಡಿದರು.

ವೇದಿಕೆಯಲ್ಲಿ ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ವೆಂಕಟ್ ವಳಲಂಬೆ, ಎಣ್ಮೂರು ಗ್ರಾ.ಪಂ ಉಪಾಧ್ಯಕ್ಷ ಕರುಣಾಕರ ಹುದೇರಿ, ಸದಸ್ಯೆ ಗೀತಾ ಪೂದೆ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಆಲಂಕಾರು ಶಾಲಾ ಮುಖ್ಯಗುರು ನಿಂಗರಾಜು, ರಾಷ್ಟ್ರಪ್ರಶಸ್ತಿ ಪುರಸ್ಕೃ ತ ಸಂಶೋಧಕ ರಾಘವ ಗೌಡ ಪಲ್ಲತ್ತಡ್ಕ, ಜಯಂತ ಕೆ ಸುದೇಶ್ ರೈ, ಅವಿನಾಶ್ ದೇವರಮಜಲು, ಬಾಲಕೃಷ್ಣ ಕೊಟ್ಟಾರ, ಸುಂದರ ಉಪಸ್ಥಿತರಿದ್ದರು. ಎಸ್‍ಡಿಎಂಸಿ ಅಧ್ಯಕ್ಷೆ ಮಧು ಪಿ.ಆರ್ ಪ್ರಸ್ತಾವನೆಗೈದರು.

Advertisement

ಮುಖ್ಯಶಿಕ್ಷಕಿ ಚಂದ್ರಿಕಾ ಸ್ವಾಗತಿಸಿ, ಐತ್ತಪ್ಪ ಅಲೆಕ್ಕಾಡಿ ವಂದಿಸಿದರು. ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group