ಆಕಸ್ಮಿಕ ಬೆಂಕಿ : ಕರಕಲಾದ ವಾಹನ

November 7, 2019
9:58 PM

ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು.

Advertisement
Advertisement

ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವಿರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.
ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group