ಆನೆ ಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬರುವುದಿಲ್ಲ….!

June 26, 2019
9:00 AM

ಸುಳ್ಯ:ಮಂಡೆಕೋಲಿನಲ್ಲಿ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಳಿ ನಡೆಸಿದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿಲ್ಲ ಮತ್ತು ಆನೆಗಳನ್ನು ಓಡಿಸಲು ಇಲಾಖೆ ಪಟಾಕಿಯನ್ನೂ ಒದಗಿಸಿಲ್ಲ ಎಂಬ ದೂರುಗಳು ಬಂದಿದೆ….! ಹೀಗೆಂದು ಅರಣ್ಯ ಇಲಾಖಾ ಸಿಬಂದಿಗಳನ್ನು ಪ್ರಶ್ನಿಸಿದ್ದು ತಾ ಪಂ ಅಧ್ಯಕ್ಷ ಚನಿಯ ಕಲ್ತಡ್ಕ.

Advertisement
Advertisement

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆನೆಯ ವಿಷಯ ಚರ್ಚೆಯಾಯಿತು.  ಆನೆ ಬಂದರೂ ಬಾರದೇ ಇರುವುದು ಮಾತ್ರವಲ್ಲ ಜನಪ್ರತಿನಿಧಿಗಳಲ್ಲಿ  ಈ ಬಗ್ಗೆ ದೂರು ಹೇಳಿದ್ದು ಯಾಕೆ ಎಂದು ಅರಣ್ಯ ಸಿಬ್ಬಂದಿಗಳು ಸ್ಥಳೀಯರ ಮೇಲೆ ಸವಾರಿ ಮಾಡಿರುವ ಬಗ್ಗೆ ದೂರುಗಳಿವೆ. ಇದು ಯಾಕೆ, ಈ ರೀತಿ ವರ್ತಿಸಿದ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿ ಎಂದು ಅಧ್ಯಕ್ಷರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಹೇಳಿದರು. ಈ ಕುರಿತು ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಮಂಡೆಕೋಲು, ದೇಲಂಪಾಡಿಯಲ್ಲಿ ಸಭೆ:
ಗಡಿಪ್ರದೇಶದಲ್ಲಿ ಉಂಟಾಗಿರುವ ಆನೆ ಹಾವಳಿಯ ಕುರಿತು ಕೇರಳ ಮತ್ತು ಕರ್ನಾಟಕದ ಅಧಿಕಾರಿಗಳ ಜಂಟಿ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಮುಂದಿನ ಹಂತದಲ್ಲಿ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದರು. ಸಭೆ ನಡೆಸಿ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅದನ್ನು ಕ್ರೂಡೀಕರಿಸಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror